Select Your Language

Notifications

webdunia
webdunia
webdunia
webdunia

ಬೆಲ್ಲದ ಬಾಗೇವಾಡಿ ತೋಟದಲ್ಲಿ ಕತ್ತಿ ಅಂತ್ಯಕ್ರಿಯೆ

ಬೆಲ್ಲದ ಬಾಗೇವಾಡಿ ತೋಟದಲ್ಲಿ ಕತ್ತಿ ಅಂತ್ಯಕ್ರಿಯೆ
ಬೆಳಗಾವಿ , ಬುಧವಾರ, 7 ಸೆಪ್ಟಂಬರ್ 2022 (11:14 IST)
ಬೆಳಗಾವಿ : ಉಮೇಶ್ ಕತ್ತಿ ವಿಧಿವಶರಾದ ಹಿನ್ನೆಲೆ ಹುಟ್ಟೂರು ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಶೋಕ ಮಡುಗಟ್ಟಿದೆ.

ನಿಧನರಾದ ವಿಷಯ ತಿಳಿದು ಮಧ್ಯರಾತ್ರಿಯೇ ಕತ್ತಿ ನಿವಾಸದತ್ತ ಹರಿದು ಜನರು ಬರುತ್ತಿದ್ದಾರೆ. ಹುಟ್ಟೂರು ಬೆಲ್ಲದ ಬಾಗೇವಾಡಿಯಲ್ಲೇ ಒಂದಷ್ಟು ಕುಟುಂಬ ಸದಸ್ಯರಿದ್ದಾರೆ. 

ಬೆಂಗಳೂರು ಎಚ್ಎಎಲ್ನಿಂದ ಹೊರಟ ವಿಶೇಷ ಹೆಲಿಕಾಪ್ಟರ್ನಲ್ಲಿ ಪಾರ್ಥಿವ ಶರೀರವನ್ನು ತರಲಾಗುತ್ತಿದೆ. ಬೆಳಗ್ಗೆ 9 ಗಂಟೆಗೆ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಪಾರ್ಥಿವ ಶರೀರ ಆಗಮಿಸಲಿದ್ದು 10:30ಕ್ಕೆ ಸಂಕೇಶ್ವರದ ಹಿರಣ್ಯಕೇಶಿ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 

ಕತ್ತಿ ಹುಟ್ಟೂರು 12ಗಂಟೆಗೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಂಜೆ 5ಗಂಟೆಗೆ ಬೆಲ್ಲದ ಬಾಗೇವಾಡಿ ತೋಟದಲ್ಲಿ ಅಂತ್ಯಕ್ರಿಯೆ ನೇರವೇರಲಿದೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾಹಿತಿ ನೀಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಉಮೇಶ್ ಕತ್ತಿ ನಿಧನಕ್ಕೆ ಆರಗ ಸಂತಾಪ