Webdunia - Bharat's app for daily news and videos

Install App

ಇನ್ಮುಂದೆ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ : ನಾಗೇಶ್

Webdunia
ಸೋಮವಾರ, 19 ಸೆಪ್ಟಂಬರ್ 2022 (14:12 IST)
ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ನೈತಿಕ ಶಿಕ್ಷಣ ಪಠ್ಯದಲ್ಲಿ ಭಗವದ್ಗೀತೆ ಬೋಧನೆ ಮಾಡುತ್ತೇವೆ ಅಂತ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿಯ ಪ್ರಾಣೇಶ್ ಹಾಗೂ ರವಿಕುಮಾರ್ ಪ್ರಶ್ನೆಗೆ ಉತ್ತರ ನೀಡಿದ ಅವರು, ಶಾಲಾ ಪಠ್ಯ ಪುಸ್ತಕಗಳಲ್ಲಿ ಭಗವದ್ಗೀತೆ ಪ್ರತ್ಯೇಕವಾಗಿ ಬೋಧಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ. ಆದರೆ ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ.

ಇದಕ್ಕಾಗಿ ಒಂದು ಸಮಿತಿ ರಚನೆ ಮಾಡುತ್ತೇವೆ. ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಶಾಲೆಗಳಲ್ಲಿ ಜಾರಿಗೆ ತರುತ್ತೇವೆ ಎಂದರು. 

ಮೊದಲು ಇದ್ದ ಆಸಕ್ತಿ ಇದ್ದಕ್ಕಿದ್ದಂತೆ ಈಗ ಯಾಕಿಲ್ಲ ಅಂತ ಪ್ರಶ್ನೆ ಮಾಡಿದರು. ಅಲ್ಲದೇ ಬಾಬಾ ಬುಡನ್ ಗಿರಿಗೆ ದತ್ತಾಪೀಠ ಅಂತ ಹೆಸರು ಇಡಬೇಕು ಅಂತ ಒತ್ತಾಯ ಮಾಡಿದರು.

ಇದಕ್ಕೆ ಉತ್ತರ ನೀಡಿದ ಸಚಿವರು, ಪಠ್ಯದಲ್ಲಿ ಸೇರ್ಪಡೆ ಇಲ್ಲ ಅಂತ ಹೇಳಿದ್ದೇವೆ. ನೈತಿಕ ಶಿಕ್ಷಣದಲ್ಲಿ ಭಗವದ್ಗೀತೆ ಸೇರ್ಪಡೆ ಮಾಡುತ್ತೇವೆ. ಡಿಸೆಂಬರ್ ವೇಳೆಗೆ ನೈತಿಕ ಶಿಕ್ಷಣ ಶಾಲೆಗಳಲ್ಲಿ ಪ್ರಾರಂಭ ಮಾಡುತ್ತೇವೆ.

ಇತಿಹಾಸದ ತಪ್ಪುಗಳನ್ನು ಪಠ್ಯದಲ್ಲಿ ಸರಿ ಮಾಡುವ ಕೆಲಸ ಮಾಡ್ತಿದ್ದೇವೆ. ಬಾಬಾ ಬುಡನ್ ಗಿರಿ ಹೆಸರು ಈಗಾಗಲೇ ದತ್ತಾತ್ರೇಯ ಪೀಠ ಅಂತ ಬದಲಾವಣೆ ಮಾಡಲಾಗಿದೆ ಅಂತ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments