Select Your Language

Notifications

webdunia
webdunia
webdunia
webdunia

ಕೇಂದ್ರ ಸಚಿವೆಯನ್ನು ಚುಡಾಯಿಸಿದ ಯುವಕರ ಬಂಧನ

ಕೇಂದ್ರ ಸಚಿವೆಯನ್ನು ಚುಡಾಯಿಸಿದ ಯುವಕರ ಬಂಧನ
ವಾರಾಣಾಸಿ , ಬುಧವಾರ, 13 ಜೂನ್ 2018 (14:49 IST)
ವಾರಾಣಾಸಿ : ಕೇಂದ್ರ ಸಚಿವೆಯೊಬ್ಬರನ್ನು ಪುಂಡರು ಚುಡಾಯಿಸಿದ ಘಟನೆ ಸೋಮವಾರ ಉತ್ತರ ಪ್ರದೇಶದ ಅರೋಯ್​ ಮತ್ತು ಮಿರ್ಜಾಮುರದ್​ ನಡುವೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾದ ಅನುಪ್ರಿಯಾ ಪಟೇಲ್​ ಅವರು  ಸೋಮವಾರ ಕಾಶಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಮೂವರು ಪುಂಡರು ಸಚಿವೆಯ ಕಾರನ್ನುಓವರ್​ ಟೇಕ್​ ಮಾಡಿ ಅಸಭ್ಯವಾಗಿ ಬೈದಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಯವರ ಜೊತೆಗೂ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ.


ಈ ಘಟನೆಯ ಬಗ್ಗೆ  ಸಚಿವೆ ಅನುಪ್ರಿಯಾ ಪಟೇಲ್​ ಅವರು ವಾರಣಾಸಿಯ ಎಸ್‍ಪಿ ಎಸ್ ಕೆ ಭಾರದ್ವಾಜ್ ಬಳಿ ದೂರು ನೀಡಿ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಆರೋಪಿಗಳನ್ನು ಪತ್ತೆಹಚ್ಚುವಂತೆ ತಿಳಿಸಿದ್ದಾರೆ. ಕೂಡಲೇ ಜಾಗೃತರಾದ ಮಿರ್ಜಾಪುರದ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಂದಿನ ದಿನಗಳಲ್ಲಿ ಕ್ಷೇತ್ರದ ಜನರ ಸಮಸ್ಯೆಗಳನ್ನು ಪರಿಹಾರ ಮಾಡುತ್ತೇನೆ - ಸೌಮ್ಯ ರೆಡ್ಡಿ