Webdunia - Bharat's app for daily news and videos

Install App

ಕೇಂದ್ರ ಸಚಿವೆಯನ್ನು ಚುಡಾಯಿಸಿದ ಯುವಕರ ಬಂಧನ

Webdunia
ಬುಧವಾರ, 13 ಜೂನ್ 2018 (14:49 IST)
ವಾರಾಣಾಸಿ : ಕೇಂದ್ರ ಸಚಿವೆಯೊಬ್ಬರನ್ನು ಪುಂಡರು ಚುಡಾಯಿಸಿದ ಘಟನೆ ಸೋಮವಾರ ಉತ್ತರ ಪ್ರದೇಶದ ಅರೋಯ್​ ಮತ್ತು ಮಿರ್ಜಾಮುರದ್​ ನಡುವೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.


ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆಯಾದ ಅನುಪ್ರಿಯಾ ಪಟೇಲ್​ ಅವರು  ಸೋಮವಾರ ಕಾಶಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಕಾರಿನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಮೂವರು ಪುಂಡರು ಸಚಿವೆಯ ಕಾರನ್ನುಓವರ್​ ಟೇಕ್​ ಮಾಡಿ ಅಸಭ್ಯವಾಗಿ ಬೈದಿದ್ದಾರೆ. ಅಲ್ಲದೇ ಭದ್ರತಾ ಸಿಬ್ಬಂದಿಯವರ ಜೊತೆಗೂ ಅಸಭ್ಯವಾಗಿ ವರ್ತಿಸಿ ಪರಾರಿಯಾಗಿದ್ದಾರೆ.


ಈ ಘಟನೆಯ ಬಗ್ಗೆ  ಸಚಿವೆ ಅನುಪ್ರಿಯಾ ಪಟೇಲ್​ ಅವರು ವಾರಣಾಸಿಯ ಎಸ್‍ಪಿ ಎಸ್ ಕೆ ಭಾರದ್ವಾಜ್ ಬಳಿ ದೂರು ನೀಡಿ ನೋಂದಣಿ ಇಲ್ಲದ ಕಾರಿನಲ್ಲಿ ಬಂದ ಆರೋಪಿಗಳನ್ನು ಪತ್ತೆಹಚ್ಚುವಂತೆ ತಿಳಿಸಿದ್ದಾರೆ. ಕೂಡಲೇ ಜಾಗೃತರಾದ ಮಿರ್ಜಾಪುರದ್ ಪೊಲೀಸರು ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments