Webdunia - Bharat's app for daily news and videos

Install App

ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ

Webdunia
ಭಾನುವಾರ, 4 ಜೂನ್ 2023 (14:47 IST)
ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಗೂ ಮುನ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.

ಕ್ಯಾಬಿನೆಟ್ ಸಭೆಯಲ್ಲಿಯೇ ಗ್ಯಾರಂಟಿ ಘೋಷಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಸುದ್ದಿಗೋಷ್ಢಿ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.

5 ಗ್ಯಾರಂಟಿಗಳಲ್ಲಿ ಎಷ್ಟು ಗ್ಯಾರಂಟಿ ಘೋಷಣೆ ಅನ್ನೋದೇ ಸದ್ಯಕ್ಕೆ ಇರುವ ಕುತೂಹಲ. 5 ರ ಪೈಕಿ ಮೂರು ಗ್ಯಾರಂಟಿಗಳ ಘೋಷಣೆ ಸಾಧ್ಯತೆ ಇದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. ಉಳಿದ ಗೃಹಲಕ್ಷ್ಮಿ ಹಾಗೂ ಯುವನಿಧಿ ಗ್ಯಾರಂಟಿ ಸ್ವಲ್ಪ ದಿನಗಳ ನಂತರ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments