Webdunia - Bharat's app for daily news and videos

Install App

ಕುತೂಹಲ ಮೂಡಿಸಿದ ಸಚಿವ ಸಂಪುಟ ಸಭೆ

Webdunia
ಭಾನುವಾರ, 4 ಜೂನ್ 2023 (14:47 IST)
ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಗೂ ಮುನ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.

ಕ್ಯಾಬಿನೆಟ್ ಸಭೆಯಲ್ಲಿಯೇ ಗ್ಯಾರಂಟಿ ಘೋಷಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಸುದ್ದಿಗೋಷ್ಢಿ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.

5 ಗ್ಯಾರಂಟಿಗಳಲ್ಲಿ ಎಷ್ಟು ಗ್ಯಾರಂಟಿ ಘೋಷಣೆ ಅನ್ನೋದೇ ಸದ್ಯಕ್ಕೆ ಇರುವ ಕುತೂಹಲ. 5 ರ ಪೈಕಿ ಮೂರು ಗ್ಯಾರಂಟಿಗಳ ಘೋಷಣೆ ಸಾಧ್ಯತೆ ಇದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. ಉಳಿದ ಗೃಹಲಕ್ಷ್ಮಿ ಹಾಗೂ ಯುವನಿಧಿ ಗ್ಯಾರಂಟಿ ಸ್ವಲ್ಪ ದಿನಗಳ ನಂತರ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈ ಉರಿ ತಾಳಲಾರದೆ ನೀರಿನ ಹೊಂಡದಲ್ಲೇ 5 ವರ್ಷ ಕಳೆದ ಬಾಲಕ, ಇದೀಗ ದಿಢೀರ್ ವಿಮಾನವೇರಿದ್ದೇಕೆ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಮುಂದಿನ ಸುದ್ದಿ
Show comments