Webdunia - Bharat's app for daily news and videos

Install App

ಕೊವಿಡ್ 19 ಲಸಿಕೆ ಗೀತೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

Webdunia
ಭಾನುವಾರ, 17 ಅಕ್ಟೋಬರ್ 2021 (11:20 IST)
ದೇಶಾದ್ಯಂತ ಕೊವಿಡ್ 19 ಲಸಿಕೆ ಅಭಿಯಾನ ಭರದಿಂದ ಸಾಗುತ್ತಿದೆ. ಹಾಗೇ ಇನ್ನೇನು ಶೀಘ್ರದಲ್ಲೇ 100 ಕೋಟಿಯ ದಾಖಲೆ ತಲುಪಲಿದೆ.ಇದೊಂದು ಮೈಲಿಗಲ್ಲು ತಲುಪಲಿರುವ ಹೊತ್ತಲ್ಲೇ ಕೊವಿಡ್ 19 ಲಸಿಕಾ ಗೀತೆಯೊಂದು ರಚನೆಗೊಂಡಿದೆ.

  ಪದ್ಮಶ್ರೀ ಪುರಸ್ಕೃತ ಗಾಯಕ ಕೈಲಾಶ್ ಖೇರ್ ಹಾಡಿರುವ ಈ ಆಡಿಯೋ, ವಿಷ್ಯುವಲ್ (ಧ್ವನಿ ಮತ್ತು ದೃಶ್ಯ) ಲಸಿಕೆ ಗೀತೆಯನ್ನು ಕೇಂದ್ರ ಸರ್ಕಾರ ಇಂದು ದೆಹಲಿಯ ಶಾಸ್ತ್ರಿ ಭವನ್ದಲ್ಲಿ ಬಿಡುಗಡೆ ಮಾಡಿದ್ದು, ಸಚಿವ ಹರ್ದೀಪ್ ಸಿಂಗ್ ಪುರಿ ತಮ್ಮ ಟ್ವಿಟರ್ ಅಕೌಂಟ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಈ ಕೊವಿಡ್ 19 ಲಸಿಕಾ ಗೀತೆ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಮನ್ಸುಖ್ ಮಾಂಡವಿಯಾ ಮತ್ತಿತರ ಕೇಂದ್ರ ಮಟ್ಟದ ಅಧಿಕಾರಿಗಳು ಇದ್ದರು. ಈ ಹಾಡನ್ನು ತೈಲ ಮತ್ತು ಅನಿಲ ಸಾರ್ವಜನಿಕ ವಲಯದ ಸಂಸ್ಥೆಗಳು ನಿರ್ಮಾಣ ಮಾಡಿವೆ.  ಇನ್ನು ಗಾಯನ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹರ್ದೀಪ್ ಪುರಿ, ಮುಂದಿನ ವಾರ ಭಾರತ 100 ಕೋಟಿ ಕೊವಿಡ್ 19 ಲಸಿಕೆ ಗುರಿಯನ್ನು ಮುಟ್ಟಲಿದೆ. ಕೊವಿಡ್ 19 ಲಸಿಕೆ ಬಗ್ಗೆ ಋಣಾತ್ಮಕ ಅಭಿಪ್ರಾಯ ಹುಟ್ಟುಹಾಕಲು ಪ್ರಯತ್ನ ಪಟ್ಟವರು ವಿಫಲರಾಗಿದ್ದಾರೆ. ದೇಶದಲ್ಲೀಗ ಕೊವಿಡ್ 19 ಲಸಿಕೆ ಅಭಿಯಾನ ಚಳವಳಿಯಾಗಿ ಮಾರ್ಪಟ್ಟಿದ್ದು ತುಂಬ ತೃಪ್ತಿ ತಂದಿದೆ ಎಂದು ತಿಳಿಸಿದರು. ಹಾಗೇ, ಹಾಡುಗಾರರು ಜನರ ಕಲ್ಪನೆಯನ್ನು ಹಿಡಿದಿಡುವ ಶಕ್ತಿ ಹೊಂದಿರುತ್ತಾರೆ. ಈ ಹಾಡಿನ ಮೂಲಕ ಕೈಲಾಶ್ ಖೇರ್ ಕೊವಿಡ್ 19 ಲಸಿಕೆ ಬಗ್ಗೆ ಇರುವ ಮಿಥ್ಯೆಗಳನ್ನು ಹೋಗಲಾಡಿಸಿ, ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments