Webdunia - Bharat's app for daily news and videos

Install App

ಸಿಗರೇಟ್ ಕೊಡದ ಕಾರಣಕ್ಕೆ ಯುವಕರಿಬ್ಬರ ಮೇಲೆ ಮಾರಣಾಂತಿಕ ಹಲ್ಲೆ

Webdunia
ಮಂಗಳವಾರ, 2 ಅಕ್ಟೋಬರ್ 2018 (10:53 IST)
ನವದೆಹಲಿ : ಸಿಗರೇಟ್ ಕೊಡಲಿಲ್ಲ ಎಂಬ ಕ್ಷುಲಕ ಕಾರಣಕ್ಕೆ 29 ವರ್ಷದ ಯುವಕ ಹಾಗೂ ಆತನ ಸ್ನೇಹಿತನನ್ನು ರಾಡ್ ನಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ನವದೆಹಲಿಯಲ್ಲಿ ನಡೆದಿದೆ.

ಹಲ್ಲೆಗೊಳಗಾದ ಯುವಕರನ್ನು ಗೌರವ್ ಪಟಿಯಾಲ್ ಹಾಗೂ ರೋಹಿತ್ ಬಿಷ್ಟ್ ಎಂದು ಗುರುತಿಸಲಾಗಿದೆ. ಈ ಇಬ್ಬರು ಯುವಕರು ಕೊನ್ನಾಗ್ಟ್ ಪ್ರದೇಶದಲ್ಲಿ ಸಿಗರೇಟ್ ಸೇದುತ್ತಿದ್ದರು. ಇದೇ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೌರವ್ ಪಟಿಯಾಲ್ ಬಳಿ ಸಿಗರೇಟ್ ನೀಡುವಂತೆ ಕೇಳಿದ್ದಾನೆ.


ಗೌರವ್ ಬಳಿ ಹೆಚ್ಚಿನ ಸಿಗರೇಟ್ ಇಲ್ಲದ ಕಾರಣ ಆತ ಅಪರಿಚಿತನಿಗೆ ಸಿಗರೇಟ್ ನೀಡಲು ನಿರಾಕರಿಸಿದ್ದಾನೆ. ಇದರಿಂದ ಕೋಪಗೊಂಡು ಹೊರಟುಹೋದ ಆತ ತನ್ನ ಒಂದಿಷ್ಟು ಗೆಳೆಯರೊಂದಿಗೆ ಮತ್ತದೇ ಸ್ಥಳಕ್ಕೆ ಬಂದು ಗೌರವ್ ಪಟಿಯಾಲ್ ಹಾಗೂ ರೋಹಿತ್ ಬಿಷ್ಟ್ ಮೇಲೆ
ರಾಡ್ ನಿಂದ ಹೊಡೆದು ಮಾರಣಾಂತಿಕ ಹಲ್ಲೆ ಮಾಡಿದ್ದಾನೆ.


 

ಘಟನೆಯಲ್ಲಿ ಇಬ್ಬರಿಗೂ ತೀವ್ರ ರಕ್ತಸ್ರಾವವಾಗಿದೆ. ಗೌರವ್​ಗೆ​ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಟಿಚ್​​ ಮಾಡಲಾಗಿದೆ. ರೋಹಿತ್​​ಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆ ಸಂಬಂಧ ಸೆಕ್ಷನ್ 308ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವಾರದ ಹವಾಮಾನ ಬದಲಾವಣೆಯನ್ನು ತಪ್ಪದೇ ಗಮನಿಸಿ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ಮುಂದಿನ ಸುದ್ದಿ
Show comments