ಚಾಮುಂಡೇಶ್ವರಿ ಕ್ಷೇತ್ರದ ಪ್ರಚಾರದ ವೇಳೆ ಸಿಎಂಗೆ ಮುಜುಗರದ ಮೇಲೆ ಮುಜುಗರ

Webdunia
ಸೋಮವಾರ, 2 ಏಪ್ರಿಲ್ 2018 (16:15 IST)
ಚುನಾವಣೆ ಪ್ರಚಾರದ ವೇಳೆಯಲ್ಲಿ ಸಿಎಂ ಆಗಿ ನಮ್ಮೂರಿಗೆ ಏನ್ ಮಾಡಿದ್ದೀರಿ ಎಂದು ಜನ ಪ್ರಶ್ನಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲು ಸಿಎಂ ಹಿಂದೇಟು ಹಾಕುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಶಾಸಕ ಸತ್ಯನಾರಾಯಣರ ಸ್ವಗ್ರಾಮದಲ್ಲಿ ಅಭಿವೃದ್ಧಿಗೆ ಹಣ ಏಕೆ ಕೊಡಲಿಲ್ಲ ಎಂದು ಸಿಎಂಗೆ ಪ್ರಶ್ನಿಸಿದ ಗ್ರಾಮಸ್ಥರು, ಸಿಎಂ ಪ್ರಚಾರಕ್ಕೆ ಬಂದಾಗ  ಯಲಚಹಳ್ಳಿಯಲ್ಲಿ ಗ್ರಾಮದ ಜನತೆ ಜಿಟಿ ದೇವೇಗೌಡ, ಕುಮಾರಸ್ವಾಮಿ ಪರ ಘೋಷಣೆ ಕೂಗಿದ್ದರಿಂದ ಸಿಎಂ ಸಿದ್ದರಾಮಯ್ಯ ಮುಜುಗರಕ್ಕೆ ಒಳಗಾದಂತೆ ಕಂಡು ಬಂದಿದೆ ಎನ್ನಲಾಗುತ್ತಿದೆ.
 
ಜೆಡಿಎಸ್ ಪರ ಘೋಷಣೆ ಕೇಳುತ್ತಿದ್ದಂತೆ ಕಾರಿನಿಂದ ಕೆಳಗಿಳಿಯದೆ ತೆರಳಿದ ಸಿಎಂ, ಜೆಡಿಎಸ್ ಮುಖಂಡರನ್ನು ಸೆಳೆಯುವ ಪ್ರಯತ್ನಗಳು ಮೇಲಿಂದ ಮೇಲೆ ವಿಫಲವಾಗಿದ್ದಾರೆ. ಬೆಳವಾಡಿ ಶಿವಮೂರ್ತಿ, ಮಾವನಹಳ್ಳಿ ಸಿದ್ದೇಗೌಡಗೆ ಗಾಳ ಹಾಕಿ ಕೂಡಾ ವಿಫಲವಾಗಿದ್ದಾರೆ ಎನ್ನಲಾಗುತ್ತಿದೆ.
 
ಇಂದು ಕ್ಷೇತ್ರದಲ್ಲಿ ನಾಲ್ಕನೇ ದಿನದ ಪ್ರವಾಸ ಹಮ್ಮಿಕೊಂಡಿರುವ ಸಿಎಂ ಸಿದ್ದರಾಮಯ್ಯ, ನಾಯಕರು ಹಾಗೂ ಲಿಂಗಾಯತ ಸಮುದಾಯಗಳ ಗ್ರಾಮಗಳಿಗೆ ಭೇಟಿ ನೀಡಿ ಜಯಪುರ ಹೋಬಳಿಯಲ್ಲೂ ಸಿಎಂ ಸಿದ್ದರಾಮಯ್ಯ ಪ್ರಚಾರ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments