Webdunia - Bharat's app for daily news and videos

Install App

ಕೊರೊನಾ ಕಂಟ್ರೋಲ್‌ಗೆ ತಜ್ಞರ ವರದಿ ಕೇಳಿದ ಸರ್ಕಾರ

Webdunia
ಗುರುವಾರ, 28 ಏಪ್ರಿಲ್ 2022 (14:37 IST)
ಬೆಂಗಳೂರು : ಕೊರೊನಾ 4ನೇ ಅಲೆಯ ಭೀತಿ ರಾಜ್ಯದಲ್ಲಿ ಪ್ರಾರಂಭವಾಗಿದೆ. ನಿಧಾನಗತಿಯಲ್ಲಿ ಕೊರೊನಾ ಕೇಸ್ ಹೆಚ್ಚಳ ಆಗುತ್ತಿದೆ.

ಕೊರೊನಾ 4ನೇ ಅಲೆಯ ಭೀತಿಯ ಹಿನ್ನೆಲೆಯಲ್ಲಿ ಎಚ್ಚೆತ್ತಿರುವ ಸರ್ಕಾರ, ನಾಲ್ಕನೇ ಅಲೆ ತಡೆಗೆ ತಾಂತ್ರಿಕ ಸಲಹಾ ಸಮಿತಿಯಿಂದ ವರದಿ ನೀಡುವಂತೆ ಸೂಚನೆ ನೀಡಿದೆ.

ನಿನ್ನೆಯಷ್ಟೆ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆದಿತ್ತು. ಸಭೆಯಲ್ಲಿ ಅನಗತ್ಯವಾಗಿ ಯಾವುದೇ ನಿರ್ಬಂಧ ಹಾಕಬೇಡಿ ಅಂತ ಪ್ರಧಾನಿಗಳು ಸೂಚನೆ ನೀಡಿದ್ದರು. ಟೆಸ್ಟಿಂಗ್, ಟ್ರೇಸಿಂಗ್, ಟ್ರಿಟ್ಮೆಂಟ್ ಸೂತ್ರ ಅನುಷ್ಠಾನ ಮಾಡಿ ಅಂತ ಸಲಹೆ ಕೊಟ್ಟಿದ್ದರು.

ಪ್ರಧಾನಿಗಳ ಸಲಹೆ ಮೇರೆಗೆ ರಾಜ್ಯ ಸರ್ಕಾರವೂ ಕೂಡಾ ಯಾವುದೇ ಟಫ್ ರೂಲ್ಸ್ ಜಾರಿ ಮಾಡದೇ ಕೆಲವೊಂದು ನಿರ್ಧಾರಗಳನ್ನ ಮಾತ್ರ ಘೋಷಣೆ ಮಾಡಿದೆ.  ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೆಲ ಪ್ರಾರಂಭಿಕ ನಿಯಮಗಳನ್ನು ಸರ್ಕಾರ ಜಾರಿ ಮಾಡಿದೆ. ಅದನ್ನ ಹೊರತುಪಡಿಸಿ ಕೆಲವು ಕ್ರಮಗಳನ್ನು ಸರ್ಕಾರ ಜಾರಿ ಮಾಡಿದೆ.

ರಾಜ್ಯದಲ್ಲಿ ಜೂನ್ ವೇಳೆಗೆ 4ನೇ ಅಲೆ ಬರುವ ನಿರೀಕ್ಷೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರ ಸಿದ್ದವಾಗಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ವರದಿ ನೀಡುವಂತೆ ತಾಂತ್ರಿಕ ಸಲಹಾ ಸಮಿತಿಗೆ ಸರ್ಕಾರ ಸೂಚನೆ ನೀಡಿದೆ.

ರಾಜ್ಯಕ್ಕೆ 4ನೇ ಅಲೆ ವೈಜ್ಞಾನಿಕವಾಗಿ ಯಾವಾಗ ಪ್ರಾರಂಭ ಆಗಬಹುದು. ನಾಲ್ಕನೇ ಅಲೆ ಅಂತ್ಯ ಯಾವಾಗ ಆಗಬಹುದು? ಅನ್ನೋ ಮಾಹಿತಿ ನೀಡಲು ತಜ್ಞರಿಗೆ ಮನವಿ ಮಾಡಲಾಗಿದೆ. 4ನೇ ಅಲೆಯ ತೀವ್ರತೆ ಹೇಗೆ ಇರಲಿದೆ? ಬೇರೆ ಬೇರೆ ದೇಶಗಳು, ರಾಜ್ಯಗಳ ವರದಿ ಪರಾಮರ್ಶಿಸಿ ವರದಿ ನೀಡುವಂತೆ ಸರ್ಕಾರ ಸೂಚನೆ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments