Webdunia - Bharat's app for daily news and videos

Install App

ಪೊಲೀಸರ ಸ್ವಾತಂತ್ರ್ಯ ಕಸಿಯಲು ಮುಂದಾದ ಸರ್ಕಾರ?

Webdunia
ಮಂಗಳವಾರ, 20 ಸೆಪ್ಟಂಬರ್ 2022 (14:01 IST)
ಬೆಂಗಳೂರು : ಕೆಳಹಂತದ ಪೊಲೀಸರ ಸ್ವಾತಂತ್ರ್ಯ ಕಸಿಯಲು ಸರ್ಕಾರ ಮುಂದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಶಿಸ್ತು ನಡವಳಿಕೆ ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಿದೆ.

ಕೆಳಹಂತದ ಪೊಲೀಸರು ಇನ್ನು ಮುಂದೆ ಶಿಸ್ತು ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವ ಹಾಗೆ ಇಲ್ಲ. ಅಧಿಕಾರಿಗಳ ನಿರ್ಧಾರವೇ ಇನ್ಮುಂದೆ ಗೃಹ ಇಲಾಖೆಯಲ್ಲಿ ಅಂತಿಮವಾಗಲಿದೆ. 

ಈ ಸಂಬಂಧ ಈಗಾಗಲೇ ಗೃಹ ಇಲಾಖೆ ಕರಡು ಪ್ರಕಟಿಸಿದೆ. ಆ ಮೂಲಕ IPS ಅಧಿಕಾರಿಗಳ ತೀರ್ಮಾನದ ವಿರುದ್ದ ಕೆಳಹಂತದ ಅಧಿಕಾರಿಗಳು ಮೇಲ್ಮನವಿ ಸಲ್ಲಿಸುವ ಅವಕಾಶಕ್ಕೆ ಕೊಕ್ಕೆ ಹಾಕಲು ಸರ್ಕಾರ ಮುಂದಾಗಿದೆ. ಕರಡಿಗೆ ಆಕ್ಷೇಪಣೆ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ.

ಹೊಸ ನಿಯಮದ ಪ್ರಕಾರ PSI, SI, ASI, ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ವರ್ಗದ ಮೇಲೆ ಭ್ರಷ್ಟಾಚಾರ, ಅಶಿಸ್ತು ಇನ್ನಿತರ ಆರೋಪ ಕೇಳಿ ಬಂದಾಗ ಹಿರಿಯ ಅಧಿಕಾರಿಗಳು ವಿಚಾರಣೆ ನಡೆಸುತ್ತಾರೆ.

ಹಿರಿಯ ಅಧಿಕಾರಿಗಳು ದಂಡ, ಮುಂಬಡ್ತಿ ತಡೆ ಹಿಡಿಯುವ ಶಿಕ್ಷೆ ನೀಡುತ್ತಾರೆ. ಹಿರಿಯ ಅಧಿಕಾರಿಗಳ ಈ ತೀರ್ಪಿನ ವಿರುದ್ಧ ಇಷ್ಟು ದಿನ ಮೇಲ್ಮನವಿ ಹೋಗಲು ಅವಕಾಶ ಇತ್ತು. ಈ ಅವಕಾಶವನ್ನ ಕೈಬಿಟ್ಟು, ಹಿರಿಯ ಅಧಿಕಾರಿಗಳ ತೀರ್ಪಿನ ವಿರುದ್ದ ಮೇಲ್ಮನವಿ ಹೋಗಲು ಅವಕಾಶ ರದ್ದು ಮಾಡುವ ನಿಯಮ ಜಾರಿಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments