Webdunia - Bharat's app for daily news and videos

Install App

ಪೊಲೀಸರ ಸ್ವಾತಂತ್ರ್ಯ ಕಸಿಯಲು ಮುಂದಾದ ಸರ್ಕಾರ?

Webdunia
ಮಂಗಳವಾರ, 20 ಸೆಪ್ಟಂಬರ್ 2022 (14:01 IST)
ಬೆಂಗಳೂರು : ಕೆಳಹಂತದ ಪೊಲೀಸರ ಸ್ವಾತಂತ್ರ್ಯ ಕಸಿಯಲು ಸರ್ಕಾರ ಮುಂದಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ ಶಿಸ್ತು ನಡವಳಿಕೆ ನಿಯಮಗಳಿಗೆ ತಿದ್ದುಪಡಿ ತರಲು ನಿರ್ಧರಿಸಿದೆ.

ಕೆಳಹಂತದ ಪೊಲೀಸರು ಇನ್ನು ಮುಂದೆ ಶಿಸ್ತು ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸುವ ಹಾಗೆ ಇಲ್ಲ. ಅಧಿಕಾರಿಗಳ ನಿರ್ಧಾರವೇ ಇನ್ಮುಂದೆ ಗೃಹ ಇಲಾಖೆಯಲ್ಲಿ ಅಂತಿಮವಾಗಲಿದೆ. 

ಈ ಸಂಬಂಧ ಈಗಾಗಲೇ ಗೃಹ ಇಲಾಖೆ ಕರಡು ಪ್ರಕಟಿಸಿದೆ. ಆ ಮೂಲಕ IPS ಅಧಿಕಾರಿಗಳ ತೀರ್ಮಾನದ ವಿರುದ್ದ ಕೆಳಹಂತದ ಅಧಿಕಾರಿಗಳು ಮೇಲ್ಮನವಿ ಸಲ್ಲಿಸುವ ಅವಕಾಶಕ್ಕೆ ಕೊಕ್ಕೆ ಹಾಕಲು ಸರ್ಕಾರ ಮುಂದಾಗಿದೆ. ಕರಡಿಗೆ ಆಕ್ಷೇಪಣೆ ಸಲ್ಲಿಸಲು ನಾಳೆ ಕೊನೆ ದಿನವಾಗಿದೆ.

ಹೊಸ ನಿಯಮದ ಪ್ರಕಾರ PSI, SI, ASI, ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್ ವರ್ಗದ ಮೇಲೆ ಭ್ರಷ್ಟಾಚಾರ, ಅಶಿಸ್ತು ಇನ್ನಿತರ ಆರೋಪ ಕೇಳಿ ಬಂದಾಗ ಹಿರಿಯ ಅಧಿಕಾರಿಗಳು ವಿಚಾರಣೆ ನಡೆಸುತ್ತಾರೆ.

ಹಿರಿಯ ಅಧಿಕಾರಿಗಳು ದಂಡ, ಮುಂಬಡ್ತಿ ತಡೆ ಹಿಡಿಯುವ ಶಿಕ್ಷೆ ನೀಡುತ್ತಾರೆ. ಹಿರಿಯ ಅಧಿಕಾರಿಗಳ ಈ ತೀರ್ಪಿನ ವಿರುದ್ಧ ಇಷ್ಟು ದಿನ ಮೇಲ್ಮನವಿ ಹೋಗಲು ಅವಕಾಶ ಇತ್ತು. ಈ ಅವಕಾಶವನ್ನ ಕೈಬಿಟ್ಟು, ಹಿರಿಯ ಅಧಿಕಾರಿಗಳ ತೀರ್ಪಿನ ವಿರುದ್ದ ಮೇಲ್ಮನವಿ ಹೋಗಲು ಅವಕಾಶ ರದ್ದು ಮಾಡುವ ನಿಯಮ ಜಾರಿಗೆ ಸರ್ಕಾರ ನಿರ್ಧಾರ ಕೈಗೊಂಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments