Webdunia - Bharat's app for daily news and videos

Install App

ಬ್ರಿಟಿಷರ ನಂತರ ನ್ಯಾಯಾಂಗಕ್ಕೆ ಉತ್ತಮ ಮೂಲಸೌಕರ್ಯ ಕಡೆಗಣಿಸಲಾಗಿದೆ: ಸಿಜೆಐ ರಮಣ

Webdunia
ಭಾನುವಾರ, 12 ಸೆಪ್ಟಂಬರ್ 2021 (10:52 IST)
ನವದೆಹಲಿ : ಭಾರತದ ನ್ಯಾಯಾಂಗ ವ್ಯವಸ್ಥೆ ಇಂದಿಗೂ ಯಾವುದೇ ಯೋಗ್ಯ ಅನುಕೂಲವಿಲ್ಲದೆ 'ಶಿಥಿಲಾವಸ್ಥೆ'ಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬ್ರಿಟಿಷರು ಹೋದ ನಂತರ ನ್ಯಾಯಾಂಗ ವ್ಯವಸ್ಥೆಯನ್ನು ಉತ್ತಮ ಮೂಲಸೌಕರ್ಯಗಳಿಂದ ಕಡೆಗಣಿಸಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಎನ್.ವಿ.ರಮಣ ವಿಷಾದ ವ್ಯಕ್ತಪಡಿಸಿದ್ದಾರೆ.

ಪ್ರಯಾಗರಾಜ್ನಲ್ಲಿ ಶನಿವಾರ ಅಲಹಾಬಾದ್ ಹೈಕೋರ್ಟ್ನ ಹೊಸ ಸಂಕೀರ್ಣ ಶಂಕುಸ್ಥಾಪನೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು, 'ಭಾರತದಲ್ಲಿ ಕೋರ್ಟ್ಗಳು ಮೂಲಭೂತ ವ್ಯವಸ್ಥೆಗಳಿಲ್ಲದೆ ಇಂದಿಗೂ ಶಿಥಿಲಾವಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಇಂತಹ ಪರಿಸ್ಥಿತಿ ಕೋರ್ಟ್ಗೆ ಆಗಮಿಸುವ ಕಕ್ಷಿಗಾರರು ಮತ್ತು ವಕೀಲರಿಗೆ ಅಹಿತಕರವಾಗಿದೆ. ನ್ಯಾಯಮೂರ್ತಿಗಳಿಗೆ, ಕೋರ್ಟ್ ಸಿಬ್ಬಂದಿಗೆ ಒಗ್ಗದ ವಾತಾವರಣವಿದೆ. ಇದರಿಂದ ಕೋರ್ಟ್ನ ಕೆಲಸಗಳು ಸಮರ್ಪಕವಾಗಿ ನಡೆಸಲು ಕಷ್ಟವಾಗುತ್ತಿದೆ. ಬ್ರಿಟಿಷರು ಭಾರತವನ್ನು ಬಿಟ್ಟು ಹೋದ ಬಳಿಕ ಕೋರ್ಟ್ಗೆ ಒದಗಿಸಬೇಕಿದ್ದ ಉತ್ತಮ ಮೂಲಭೂತ ವ್ಯವಸ್ಥೆಗಳನ್ನು ಕಡೆಗಣಿಸಲಾಗಿದೆ ಎಂದರು.
ರಾಷ್ಟ್ರೀಯ ನ್ಯಾಯಾಂಗ ಪೂರ್ವರಚನೆ ನಿಗಮ(ಎನ್ಜೆಐಸಿ)ಕ್ಕೆ ಒತ್ತು ನೀಡಲು ಇದೇ ಕಾರಣವಾಗಿದೆ. ರಾಷ್ಟ್ರೀಯ ನ್ಯಾಯಾಲಯ ಅಭಿವೃದ್ಧಿ ಯೋಜನೆಯ ಪರಿಕಲ್ಪನೆಗಳ ಅಭಿವೃದ್ಧಿ ಮತ್ತು ಅನುಷ್ಠಾನಕ್ಕೆ ತರುವ ಕೆಲಸವನ್ನು ಎನ್ಜೆಐಸಿ ನಿರ್ವಹಿಸಲಿದೆ ಎಂದು ಸಿಜೆಐ ರಮಣ ತಿಳಿಸಿದರು.
ಇದೇ ವೇಳೆ, ಪ್ರಧಾನಿ ಇಂದಿರಾ ಗಾಂಧಿಯವರನ್ನು ಅನರ್ಹಗೊಳಿಸಿದ ಅಲಹಾಬಾದ್ ಹೈಕೋರ್ಟ್ನ 1975ರ ತೀರ್ಪು ನ್ಯಾಯಾಂಗ ಇತಿಹಾಸದಲ್ಲೇ 'ಮಹಾ ಧೈರ್ಯದ ತೀರ್ಪು' ಎಂದು ರಮಣ ವ್ಯಾಖ್ಯಾನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments