Webdunia - Bharat's app for daily news and videos

Install App

ಎಸ್ಎಂ ಕೃಷ್ಣ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ

Webdunia
ಬುಧವಾರ, 29 ಸೆಪ್ಟಂಬರ್ 2021 (08:06 IST)
ಬೆಂಗಳೂರು (ಸೆ. 29) : ಜಗತ್ ವಿಖ್ಯಾತ ಮೈಸೂರು ದಸರಾ ಅನ್ನು ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣಾ ಉದ್ಘಾಟಿಸಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರಾಗಿ ಎಸ್ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಅಕ್ಟೋಬರ್ 7 ರಿಂದ ಆರಂಭವಾಗಲಿರುವ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಎಸ್ ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ನಡೆದ ಸಭೆಯಲ್ಲಿ ತೀರ್ಮಾನ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಬಾರಿ ಕೂಡ ಸರಳ ದಸರಾ
ಕಳೆದ ವರ್ಷದಂತೆ ಈ ಬಾರಿ ಕೂಡ ಸರಳವಾಗಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೋಂಕು ಕಡಿಮೆಯಾದರೂ ಕೋವಿಡ್ ಹಾವಳಿ ರಾಜ್ಯದಲ್ಲಿ ಇನ್ನು ಇರುವುದರಿಂದ ಹಾಗೂ ಆಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಈ ಬಾರಿಯೂ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಗಜಪಡೆ ತಾಲೀಮು ಆರಂಭ
ಈಗಾಗಲೇ ಮೈಸೂರು ಅರಮನೆ ಆವರಣ ಸೇರಿರುವ ದಸರಾ ಗಜಪಡೆಗಳು ಈಗಾಗಲೇ ಅಂಬಾರಿ ಹೊರುವ ತಾಲೀಮು ಆರಂಭಿಸಿವೆ.  ಈ ಬಾರಿ 5 ಗಂಡಾನೆ, 3 ಹೆಣ್ಣಾನೆ ಸೇರಿ ಒಟ್ಟು 8 ಆನೆಗಳನ್ನು ಆಯ್ಕೆ ಮಾಡಲಾಗಿದ್ದು,  56 ವರ್ಷದ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.
9 ದಿನವೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಸರಳ ದಸರಾ ಆಚರಣೆ ಮಾಡಿದರೂ 9 ದಿನಗಳು ಕೂಡ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ದಸರಾ ಆಚರಣೆ ಇನ್ನಷ್ಟು ಕಳೆಗಟ್ಟಲಿದೆ. ಅರಮನೆ ಸಾಂಪ್ರದಾಯಿಕ ಪದ್ಧತಿಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್ ತಿಳಿಸಿದ್ದರು
ಹೇಗಿರಲಿದೆ ಬಾರಿ ದಸರಾ
ದಸರಾ ಆಚರಣೆ ಸಂಬಂಧ ಮೈಸೂರು ಮಹಾರಾಜರ ಕುಟುಂಬದವರ ಜೊತೆ ಮೈಸೂರು ಜಿಲ್ಲಾಡಳಿತ ಹಾಗೂ ದಸರಾ ಆಚರಣೆ ಸಮಿತಿ ಚರ್ಚೆ ನಡೆಸುತ್ತದೆ. ಮೈಸೂರು ಅರಮನೆಯಲ್ಲಿ ನಡೆಯಬೇಕಾದ ಸಾಂಪ್ರದಾಯಿಕ ಆಚರಣೆಗಳು ಹಾಗೂ ಅರಮನೆ ಆವರಣ ಮತ್ತು ಚಾಮುಂಡಿ ಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ, ಸಾಂಸ್ಕೃತಿಕ, ಕಲೆ, ಸಂಗೀತ, ಕ್ರೀಡಾ ಚಟುವಟಿಕೆ, ಕುಸ್ತಿ ಪಂದ್ಯಾವಳಿ, ಪಂಜಿನ ಕವಾಯತು, ಸಿನಿಮೋತ್ಸವ, ರಂಗೋತ್ಸವ, ದೀಪೋತ್ಸವಗಳ ಆಚರಣೆಗಳಿಗೆ ಅವಕಾಶ ಇರುವುದು ಬಹುತೇಕ ಅನುಮಾನವಾಗಿದೆ. ಕಳೆದ ಬಾರಿಯಂತೆ ಖಾಸಗಿ ದರ್ಬಾರ್ ವೇಳೆ ರಾಜವಂಶಸ್ಥರು ಸೇರಿ ಕೆಲವೇ ಕೆಲವು ಮಂದಿಗೆ ಆಹ್ವಾನ ಇರುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments