Webdunia - Bharat's app for daily news and videos

Install App

ಎಸ್ಎಂ ಕೃಷ್ಣ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ

Webdunia
ಬುಧವಾರ, 29 ಸೆಪ್ಟಂಬರ್ 2021 (08:06 IST)
ಬೆಂಗಳೂರು (ಸೆ. 29) : ಜಗತ್ ವಿಖ್ಯಾತ ಮೈಸೂರು ದಸರಾ ಅನ್ನು ಈ ಬಾರಿ ಮಾಜಿ ಮುಖ್ಯಮಂತ್ರಿಗಳಾದ ಬಿಜೆಪಿ ಹಿರಿಯ ನಾಯಕ ಎಸ್ಎಂ ಕೃಷ್ಣಾ ಉದ್ಘಾಟಿಸಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರಾಗಿ ಎಸ್ ಎಂ ಕೃಷ್ಣ ಅವರನ್ನು ಆಯ್ಕೆ ಮಾಡಿರುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಅಕ್ಟೋಬರ್ 7 ರಿಂದ ಆರಂಭವಾಗಲಿರುವ ನಾಡ ಹಬ್ಬ ದಸರಾ ಮಹೋತ್ಸವಕ್ಕೆ ಎಸ್ ಎಂ ಕೃಷ್ಣ ಅವರು ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಈ ಕುರಿತು ಇಂದು ನಡೆದ ಸಭೆಯಲ್ಲಿ ತೀರ್ಮಾನ ನಡೆಸಲಾಗಿದೆ ಎಂದು ಅವರು ತಿಳಿಸಿದರು.
ಬಾರಿ ಕೂಡ ಸರಳ ದಸರಾ
ಕಳೆದ ವರ್ಷದಂತೆ ಈ ಬಾರಿ ಕೂಡ ಸರಳವಾಗಿ ದಸರಾ ಆಚರಣೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಸೋಂಕು ಕಡಿಮೆಯಾದರೂ ಕೋವಿಡ್ ಹಾವಳಿ ರಾಜ್ಯದಲ್ಲಿ ಇನ್ನು ಇರುವುದರಿಂದ ಹಾಗೂ ಆಕ್ಟೋಬರ್ ತಿಂಗಳಿನಲ್ಲಿ ಮೂರನೇ ಅಲೆ ಬರುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಹೀಗಾಗಿ ಈ ಬಾರಿಯೂ ಸರಳವಾಗಿ ದಸರಾ ಆಚರಿಸಲು ಸರ್ಕಾರ ನಿರ್ಧಾರ ತೆಗೆದುಕೊಂಡಿದೆ.
ಗಜಪಡೆ ತಾಲೀಮು ಆರಂಭ
ಈಗಾಗಲೇ ಮೈಸೂರು ಅರಮನೆ ಆವರಣ ಸೇರಿರುವ ದಸರಾ ಗಜಪಡೆಗಳು ಈಗಾಗಲೇ ಅಂಬಾರಿ ಹೊರುವ ತಾಲೀಮು ಆರಂಭಿಸಿವೆ.  ಈ ಬಾರಿ 5 ಗಂಡಾನೆ, 3 ಹೆಣ್ಣಾನೆ ಸೇರಿ ಒಟ್ಟು 8 ಆನೆಗಳನ್ನು ಆಯ್ಕೆ ಮಾಡಲಾಗಿದ್ದು,  56 ವರ್ಷದ ಅಭಿಮನ್ಯು ಅಂಬಾರಿ ಹೊರಲಿದ್ದಾನೆ.
9 ದಿನವೂ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ
ಸರಳ ದಸರಾ ಆಚರಣೆ ಮಾಡಿದರೂ 9 ದಿನಗಳು ಕೂಡ ಅರಮನೆ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ದಸರಾ ಆಚರಣೆ ಇನ್ನಷ್ಟು ಕಳೆಗಟ್ಟಲಿದೆ. ಅರಮನೆ ಸಾಂಪ್ರದಾಯಿಕ ಪದ್ಧತಿಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ಟಿ ಸೋಮಶೇಖರ್ ತಿಳಿಸಿದ್ದರು
ಹೇಗಿರಲಿದೆ ಬಾರಿ ದಸರಾ
ದಸರಾ ಆಚರಣೆ ಸಂಬಂಧ ಮೈಸೂರು ಮಹಾರಾಜರ ಕುಟುಂಬದವರ ಜೊತೆ ಮೈಸೂರು ಜಿಲ್ಲಾಡಳಿತ ಹಾಗೂ ದಸರಾ ಆಚರಣೆ ಸಮಿತಿ ಚರ್ಚೆ ನಡೆಸುತ್ತದೆ. ಮೈಸೂರು ಅರಮನೆಯಲ್ಲಿ ನಡೆಯಬೇಕಾದ ಸಾಂಪ್ರದಾಯಿಕ ಆಚರಣೆಗಳು ಹಾಗೂ ಅರಮನೆ ಆವರಣ ಮತ್ತು ಚಾಮುಂಡಿ ಬೆಟ್ಟದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಯಾವುದೇ ಅಡ್ಡಿ ಇರುವುದಿಲ್ಲ. ಆದರೆ, ಸಾಂಸ್ಕೃತಿಕ, ಕಲೆ, ಸಂಗೀತ, ಕ್ರೀಡಾ ಚಟುವಟಿಕೆ, ಕುಸ್ತಿ ಪಂದ್ಯಾವಳಿ, ಪಂಜಿನ ಕವಾಯತು, ಸಿನಿಮೋತ್ಸವ, ರಂಗೋತ್ಸವ, ದೀಪೋತ್ಸವಗಳ ಆಚರಣೆಗಳಿಗೆ ಅವಕಾಶ ಇರುವುದು ಬಹುತೇಕ ಅನುಮಾನವಾಗಿದೆ. ಕಳೆದ ಬಾರಿಯಂತೆ ಖಾಸಗಿ ದರ್ಬಾರ್ ವೇಳೆ ರಾಜವಂಶಸ್ಥರು ಸೇರಿ ಕೆಲವೇ ಕೆಲವು ಮಂದಿಗೆ ಆಹ್ವಾನ ಇರುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

ಮುಂದಿನ ಸುದ್ದಿ
Show comments