ರಣ ಬಿಸಿಲಿಗೆ ತತ್ತರಿಸಿದ ಕೊಡಗಿನ ಜನತೆ

Webdunia
ಶುಕ್ರವಾರ, 21 ಏಪ್ರಿಲ್ 2023 (07:54 IST)
ಮಡಿಕೇರಿ : ರಾಜ್ಯದೆಲ್ಲೆಡೆ ವಿಧಾನಸಭಾ ಚುನಾವಣೆಯ ಕಾವು ರಂಗೇರಿದ್ದರೆ, ಪ್ರಕೃತಿ ತವರು ಕೊಡಗು ಜಿಲ್ಲೆಯಲ್ಲಿ ಮಾತ್ರ ಚುನಾವಣಾ ಕಣ ಮಂಕಾಗಿದ್ದು, ರಣಬಿಸಿಲು ಜಿಲ್ಲೆಯ ಜನರನ್ನು ತತ್ತರಿಸುವಂತೆ ಮಾಡಿದೆ.

ಜಿಲ್ಲೆಯಲ್ಲಿ ಹಿಂದೆಂದೂ ಕಾಣದ ಬಿಸಿಲು ಹೆಚ್ಚಾಗುತ್ತಿದೆ. ತಂಪಾದ ಗಾಳಿ ಬೇಕು ಎಂದು ಬಯಸಿರುವ ಜನ, ಫ್ಯಾನ್ ಹಾಗೂ ಎಸಿ ಮೊರೆ ಹೋಗಿದ್ದಾರೆ. ಛತ್ರಿ ಇಲ್ಲದೇ ಮನೆಯಿಂದ ಹೊರಗೆ ಹೋಗಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. 

ಪಶ್ಚಿಮಘಟ್ಟ ಮತ್ತು ನಿತ್ಯಹರಿದ್ವರ್ಣ ಕಾಡುಗಳಿಂದ ಕೂಡಿರುವ ಕೊಡಗು ಜಿಲ್ಲೆಯಲ್ಲಿ ಕಳೆದ ವರ್ಷಕ್ಕಿಂತಲೂ ಅತೀ ಹೆಚ್ಚು ಬಿಸಿಲು ಕಂಡುಬರುತ್ತಿದೆ. ಈವರೆಗೂ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಸರಿಯಾಗಿ ಆಗದಿರುವುದರಿಂದ ತಾಪಮಾನ ಹೆಚ್ಚುತ್ತಲೇ ಇದೆ.

ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ಅಂಕಿ ಅಂಶಗಳ ಪ್ರಕಾರ ಗರಿಷ್ಠ ತಾಪಮಾನ 36 ರಿಂದ 40 ಡಿಗ್ರಿಯ ನಡುವೆ ಇದೆ. ಅಂದರೆ ಪ್ರತಿದಿನ 36 ಡಿಗ್ರಿಗೂ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ. ಹೀಗಾಗಿ ಸದಾ ತಂಪಾಗಿರುತ್ತಿದ್ದ ಕೊಡಗು ಕಾದ ಕಬ್ಬಿಣದಂತಾಗಿದೆ.

ಈ ಬಾರಿ ಜನವರಿಯಿಂದ ಇಲ್ಲಿವರೆಗೆ ಕೆಲವು ಭಾಗಗಳಲ್ಲಿ ಬಿಟ್ಟರೆ ಬಹುತೇಕ ಕಡೆ ಒಂದು ಮಳೆಯೂ ಆಗಿಲ್ಲ. ಇದರಿಂದಾಗಿ ತಾಪಮಾನದಲ್ಲಿ ಏರಿಕೆಯಾಗಿದ್ದು ಜನ ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಉತ್ತರಾಧಿಕಾರಿ ಚರ್ಚೆ ಆಮೇಲೆ ಇಟ್ಕೊಳ್ಳಿ, ಮೊದಲು ಅಭಿವೃದ್ಧಿ ಮಾಡಿ: ಎನ್ ರವಿಕುಮಾರ್

ಕೊನೆಗೂ ಯತೀಂದ್ರ ಸಿದ್ದರಾಮಯ್ಯಗೆ ಗುಮ್ಮಿದ ಡಿಕೆ ಶಿವಕುಮಾರ್ ಹೇಳಿದ್ದೇನು

ಪ್ರದೀಪ್ ಈಶ್ವರ್ ಎಚ್ಚರಿಕೆಯಿಂದ ಇರು ಮಗನೇ..: ಪ್ರತಾಪ್ ಸಿಂಹ ವಾರ್ನಿಂಗ್

ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

ಕರ್ನೂಲ್ ಬಸ್ ದುರಂತದಲ್ಲಿ ಸಾವನ್ನಪ್ಪಿದವರಿಗೆ ಪರಿಹಾರ ಘೋಷಿಸಿದ ಮೋದಿ: ಸಂತಾಪ ಸೂಚಿಸಿದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments