Webdunia - Bharat's app for daily news and videos

Install App

ಚಂಡಮಾರುತ ದಾಳಿ ಸಾಧ್ಯತೆ

Webdunia
ಭಾನುವಾರ, 8 ಮೇ 2022 (09:15 IST)
ಭುಬನೇಶ್ವರ : ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಶುಕ್ರವಾರ ಕಡಿಮೆ ಒತ್ತಡ ಪ್ರದೇಶ ನಿರ್ಮಾಣಗೊಂಡಿದ್ದು,

ಶೀಘ್ರವೇ ಇದು ಚಂಡಮಾರುತದ ಸ್ವರೂಪ ತಾಳಿ ಆಂಧ್ರ ಪ್ರದೇಶ ಹಾಗೂ ಒಡಿಶಾದ ತೀರ ಪ್ರದೇಶಗಳಿಗೆ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಒಡಿಶಾದಲ್ಲಿ ಹೈ ಅಲರ್ಚ್ ಘೋಷಣೆ ಮಾಡಲಾಗಿದೆ.

‘ಕಡಿಮೆ ಒತ್ತಡ ಪ್ರದೇಶವು ವಾಯುವ್ಯ ದಿಕ್ಕಿನಲ್ಲಿ ಸಾಗುತ್ತಿದ್ದು ಬಂಗಾಳಕೊಲ್ಲಿಯಲ್ಲಿ ಭಾನುವಾರ ಚಂಡಮಾರುತದ ರೂಪ ತಾಳುವ ಸಾಧ್ಯತೆಯಿದೆ. ಮೇ 10 ರಂದು ಚಂಡಮಾರುತವು ಆಂಧ್ರ ಪ್ರದೇಶ ಹಾಗೂ ಒಡಿಶಾದ ತೀರ ಪ್ರದೇಶಗಳಿಗೆ ಅಪ್ಪಳಿಸಲಿದೆ’ ಎಂದು ಐಎಂಡಿ ಅಂದಾಜಿಸಿದೆ.

ಅಲ್ಲದೇ ಚಂಡಮಾರುತದ ಪ್ರಭಾವದಿಂದಾಗಿ ಪೂರ್ವ ಕರಾವಳಿ ರಾಜ್ಯಗಳಲ್ಲಿ ಗುಡುಗು ಸಿಡಿಲುಗಳೊಂದಿಗೆ ಭಾರೀ ಮಳೆಯಾಲಿದೆ ಎಂದು ವಿಶ್ಲೇಷಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಡಿಶಾ ಸರ್ಕಾರ ಈಗಾಗಲೇ ವಿಪತ್ತು ನಿರ್ವಹಣಾ ವ್ಯವಸ್ಥೆಯನ್ನು ಸನ್ನದ್ಧ ಸ್ಥಿತಿಯಲ್ಲಿರಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ 17 ತಂಡಗಳು, ಒಡಿಆರ್ಎಫ್ನ 20 ತಂಡಗಳು ಹಾಗೂ ಅಗ್ನಿಶಾಮಕ ದಳದ 175 ತಂಡಗಳಿಗೆ ಹೈ ಅಲರ್ಚ್ ಘೋಷಣೆ ಮಾಡಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಹೋಗದಂತೆ ಸೂಚನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರಿನ ಅಪಾರ್ಟ್ ಮೆಂಟ್ ನಲ್ಲಿ ಕಾರು ಬಂದ ವೇಗಕ್ಕೆ ಸೆಕ್ಯುರಿಟಿ ಗಾರ್ಡ್ ಬಚಾವ್ ಆಗಿದ್ದೇ ಪವಾಡ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಿಜಕ್ಕೂ ಪವಾಡ.. ಸ್ನೇಹಿತರ ಜೊತೆ ಹರಟುತ್ತಿದ್ದವನು ಸೆಕೆಂಡುಗಳಲ್ಲಿ ಜೀವ ಉಳಿಸಿಕೊಂಡ Video

ಮಮ್ಮಿ ಕಾಪಾಡಿ... ಎಂದು ಪ್ರಾಣಕ್ಕಾಗಿ ಹೋರಾಡುತ್ತಿದ್ದ ಹುಡುಗಿಯನ್ನು ಕಾಪಾಡಲು ಬಂದವನು ಯಾರು ಗೊತ್ತಾ Video

ಸ್ವಲ್ಪ ಊಟ ಹಾಕಮ್ಮಾ ಎಂದಿದ್ದಕ್ಕೆ ಮಾವನಿಗೆ ಮುಖ ಮೂತಿ ನೋಡದೇ ಚಚ್ಚಿದ ಸೊಸೆ Video

ಮುಂದಿನ ಸುದ್ದಿ
Show comments