Webdunia - Bharat's app for daily news and videos

Install App

ಯೋಜನೆಗೆ ಶ್ರೀಗಳ ಹೆಸರಿಡಬೇಕು : ವಿಜಯೇಂದ್ರ

Webdunia
ಶುಕ್ರವಾರ, 1 ಏಪ್ರಿಲ್ 2022 (12:43 IST)
ತುಮಕೂರು : ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರು ಇಡಬೇಕು ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ  ಬಿ.ವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದರು.

ಇಂದು ಸಿದ್ದಗಂಗಾ ಮಠದಲ್ಲಿ ಶ್ರೀಗಳ ಜನ್ಮ ದಿನೋತ್ಸವ ಕಾರ್ಯಕ್ರಮದಲ್ಲಿ ಸ್ವಾಗತ ಭಾಷಣ ಮಾಡಿದ ಅವರು, ಇಂದು ಸಂಭ್ರಮ ಸಡಗರದ ದಿನ.

ವಿಶ್ವದಲ್ಲಿ ಪೂಜಿಸಿದ ಪುಣ್ಯಪುರುಷ, ಆಧುನಿಕ ಬಸವಣ್ಣ ಸಿದ್ದಗಂಗಾ ಶ್ರೀಗಳು. ತ್ರಿವಿಧ ದಾಸೋಹಿಗಳ ಜನ್ಮ ದಿನೋತ್ಸವ. ಸರ್ದಾರ್ ಪಟೇಲ್ ನಂತ್ರ ಧೀಮಂತ ಗೃಹ ಸಚಿವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಗಲು ಕೊಟ್ಟು ಕೆಲಸ ಮಾಡುತ್ತಿದ್ದಾರೆ. ಇಂದು ಗೃಹ ಸಚಿವರು ಮಾತ್ರ ಆಗಿರದೇ, ಮಠದ ಭಕ್ತರಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ ಎಂದರು.

ಅನ್ನದಾಸೋಹ ದೇವರ ಕೆಲಸ ಅಂತ ಭಾವಿಸಿ ಶ್ರೀಗಳು ಕೆಲಸ ಮಾಡಿದರು. ಬಸವಣ್ಣರ ವಚನದಂತೆ ಈ ಶತಮಾನದಲ್ಲಿ ಬಡವರ ಪರ ಕೆಲಸ ಮಾಡಲು ಮಠ ಕಟ್ಟಿದರು. ಮಠಕ್ಕಾಗಿ ಭಿಕ್ಷೆ ಬೇಡಿ ಮಠ ಕಟ್ಟಿದವರು ಶ್ರೀಗಳು. ಶ್ರೀಗಳು ಕರ್ನಾಟಕದ ಆಧ್ಯಾತ್ಮಿಕ ಮೇರು ಪರ್ವತವಾಗಿ ಇದ್ದವರು.

ಯಡಿಯೂರಪ್ಪನವರು 4 ಬಾರಿ ಸಿಎಂ ಆಗೋಕೆ ಶ್ರೀಗಳ ಆಶೀರ್ವಾದ ಕಾರಣ. ಸಿಎಂ ಅವರು ದಾಸೋಹ ದಿನ ಅಂತ ಘೋಷಣೆ ಮಾಡಿದ್ರು. ಬಿಸಿಯೂಟ ಯೋಜನೆಗೆ ಶಿವಕುಮಾರ ಸ್ವಾಮಿಗಳ ಹೆಸರು ಇಡಬೇಕು ಅಂತ ಇದೇ ವೇಳೆ ಸಿಎಂಗೆ ವಿಜಯೇಂದ್ರ ಮನವಿ ಮಾಡಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Liverpool Univesity: ಯುಕೆಯ ವಿದ್ಯಾಭ್ಯಾಸ ಬೆಂಗಳೂರಿನಲ್ಲಿ ಮಾಡಬೇಕುನ್ನುವವರಿಗೆ Good News

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರೊಪೆಸರ್‌ಗೆ ಬಿಗ್‌ ರಿಲೀಫ್‌

Operation Sindoor ಬಳಿಕ ಮತ್ತೇ ಅಣಕು ಪ್ರದರ್ಶನದಲ್ಲಿ ತೊಡಗಿದ ಭಾರತ, ಇದರ ಅರ್ಥವೇನು

Bantwal Abdul Rahim Case: ಬಿಜೆಪಿ ಶವಗಳ ಮೇಲೆ ರಾಜಕೀಯ ಮಾಡುತ್ತಿದೆ, ದಿನೇಶ್‌ ಗುಂಡೂರಾವ್‌

Abdul Rahim Case: 15 ಮಂದಿಯ ವಿರುದ್ಧ ಬಿತ್ತು ಎಫ್‌ಐಆರ್‌, ಚುರುಕುಗೊಂಡ ತನಿಖೆ

ಮುಂದಿನ ಸುದ್ದಿ
Show comments