Webdunia - Bharat's app for daily news and videos

Install App

ಪ್ರವಾಹ ಪೀಡಿತರ ನೆರವಿಗೆ ಹಣ ನೀಡಲು ಈ ಪತ್ರಕರ್ತ ಮಾಡಿದ ಕೆಲಸ ಮೆಚ್ಚಲೆಬೇಕು

Webdunia
ಶನಿವಾರ, 18 ಆಗಸ್ಟ್ 2018 (15:59 IST)
ತಿರುವನಂತಪುರ : ಪತ್ರಕರ್ತರೊಬ್ಬರು  ಮಗಳ  ನಿಶ್ಚಿತಾರ್ಥ ಕ್ಯಾನ್ಸಲ್ ಮಾಡಿ ಕೇರಳದ ಪ್ರವಾಹ ಪೀಡಿತರ ನೆರವಿಗೆ ನಿಂತ ಘಟನೆ ಕೇರಳದ ಕನ್ನೂರಿನಲ್ಲಿ ನಡೆದಿದೆ.


ಪತ್ರಕರ್ತ ಮನೋಜ್ ಎಂಬವರ ಮಗಳ ನಿಶ್ಚಿತಾರ್ಥ ಭಾನುವಾರ ಕನ್ನೂರಿನಲ್ಲಿ ನಡೆಯಬೇಕಿತ್ತು. ಆದರೆ ಕೇರಳದಲ್ಲಿ ಪ್ರವಾಹ ಉಂಟಾಗಿ ಜನರು ಸಂಕಷ್ಟದಲ್ಲಿರುವುದನ್ನು ಮನಗೊಂಡ ಮನೋಜ್ ಮಗಳ ನಿಶ್ಚಿತಾರ್ಥಕ್ಕೆ ಮೀಸಲಿರಿಸಿದ್ದ ಹಣವನ್ನ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.


ಈ ವಿಚಾರವನ್ನು ಮನೋಜ್ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು, ‘ ಹಲವು ದಿನಗಳಿಂದ ನಮ್ಮ ರಾಜ್ಯದಲ್ಲಿಯೇ ಪ್ರವಾಹ ಉಂಟಾಗಿ ಜನರು ತೊಂದರೆಯಲ್ಲಿದ್ದಾರೆ. ಈ ವೇಳೆಯಲ್ಲಿ ನಾವು ನಿಶ್ಚಿತಾರ್ಥವನ್ನು ಮಾಡುವುದು ಸರಿಯಲ್ಲ ಹೀಗಾಗಿ ನಿಶ್ಚಿತಾರ್ಥವನ್ನು ಕ್ಯಾನ್ಸಲ್ ಮಾಡಿದ್ದೇವೆ. ಭಾನುವಾರ ಕೇವಲ ಉಂಗುರವನ್ನು ಬದಲಾಯಿಸಲಾಗುವುದು ಎಂದು ತಿಳಿಸಿದ್ದಾರೆ.


ಹಾಗೇ ಎರಡು ಕುಟುಂಬಸ್ಥರು ನಿಶ್ಚಿತಾರ್ಥವನ್ನು ಕ್ಯಾನ್ಸಲ್ ಮಾಡುವುದರ ಬಗ್ಗೆ ಚರ್ಚಿಸಿ ಈ ನಿರ್ಣಯ ತೆಗೆದುಕೊಂಡಿದ್ದು, ನಿಶ್ಚಿತಾರ್ಥಕ್ಕೆ ಮೀಸಲಿರಿಸಿದ್ದ ಹಣವನ್ನ ಕೇರಳ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಿದ್ದೇವೆ ಎಂದು ಮನೋಜ್ ಹೇಳಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments