ಅ.1ರಿಂದ ಥಿಯೇಟರ್ ಹೌಸ್‌ಫುಲ್‌

Webdunia
ಶನಿವಾರ, 25 ಸೆಪ್ಟಂಬರ್ 2021 (15:08 IST)
ಬೆಂಗಳೂರು, ಸೆ 25 : "ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಇದರಿಂದಾಗಿ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂನಲ್ಲಿ ಸಡಿಲಿಕೆ ಮಾಡಲಾಗಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

"ಅದೇ ರೀತಿ ಅಕ್ಟೋಬರ್ 1ರಿಂದ ಸಿನಿಮಾ ಮಂದಿರಗಳಲ್ಲಿ ಹೌಸ್ಫುಲ್ಗೆ ಅನುಮತಿ ನೀಡಲಾಗುತ್ತಿದೆ," ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
"ಕೋವಿಡ್ ಸಲಹಾ ಸಮಿತಿ ಅಧಿಕಾರಿಗಳೊಂದಿಗೆ ಜೊತೆಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಫ್ಯೂ ಅವಧಿಯನ್ನು ರಾತ್ರಿ 10ರಿಂದ ಬೆಳಗ್ಗಿನ ಜಾವ 5ರವರೆಗೆ ನಿಗದಿಗೊಳಿಸಲಾಗಿದೆ."
"ಅಕ್ಟೋಬರ್ 3ರಿಂದ ಪಬ್ ಹಾಗೂ ಕ್ಲಬ್ಗಳಿಗೆ ಅನುಮತಿ ನೀಡಲಾಗುತ್ತದೆ. ರಾಜ್ಯದಲ್ಲಿ ಪ್ರಸ್ತುತ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.0.66 ಇದೆ. ಅಕ್ಟೋಬರ್ 1ರಿಂದ ಕೋವಿಡ್ ಪಾಸಿಟಿವ್ ದರ ಶೇ.1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶೇ.100ರಷ್ಟು ಸೀಟು ಭರ್ತಿಗೆ ಅವಕಾಶ ನೀಡಲಾಗುವುದು."
"ಪಾಸಿಟಿವಿಟಿ ದರ ಶೇ.1ಕ್ಕಿಂತ ಜಾಸ್ತಿ ಆದರೆ ಶೇ.50ರಷ್ಟು ಸೀಟು ಭರ್ತಿ ಹಾಗೂ ಶೇ.2ಕ್ಕಿಂತ ಜಾಸ್ತಿಯಾದರೆ ಚಿತ್ರಮಂದಿರ ಬಂದ್ ಮಾಡಲಾಗುವುದು. ಇದೇ ಮಾನದಂಡ ಪಬ್ಗಳಿಗೂ ಅನ್ವಯವಾಗಲಿದೆ," ಎಂದು ಸಿಎಂ ಮಾಹಿತಿ ನೀಡಿದರು.
ಕನಿಷ್ಠ 1 ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಪ್ರವೇಶ ಅವಕಾಶ ನೀಡಲಾಗುವುದು. ಗರ್ಭಿಣಿಯರು ಮತ್ತು ಮಕ್ಕಳಿಗೆ ಅವಕಾಶ ನೀಡದಿರಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments