Select Your Language

Notifications

webdunia
webdunia
webdunia
webdunia

ಮತ್ತೆ ಸಿಎಂ ಬದಲಾವಣೆ ಮಾತೇ ಇಲ್ಲ : ಪ್ರಹ್ಲಾದ್ ಜೋಶಿ

ಮತ್ತೆ ಸಿಎಂ ಬದಲಾವಣೆ ಮಾತೇ ಇಲ್ಲ : ಪ್ರಹ್ಲಾದ್ ಜೋಶಿ
ಹುಬ್ಬಳ್ಳಿ , ಭಾನುವಾರ, 8 ಮೇ 2022 (09:38 IST)
ಹುಬ್ಬಳ್ಳಿ : ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ, ಇದೆಲ್ಲಾ ಊಹಾಪೋಹ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಿಎಂ ಮತ್ತು ನನ್ನ ಭೇಟಿ ಸಹಜ. ಅದಕ್ಕೆ ಯಾವುದೇ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. 

ನಾನು ದೆಹಲಿಯಿಂದ ಸಾಮಾನ್ಯನಾಗಿ ಬಂದಿದ್ದೇನೆ. ಯಾವುದೇ ಲಿಸ್ಟ್ ತಂದಿಲ್ಲ. ಮುಂದಿನ ಚುನಾವಣೆವರೆಗೂ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಇರುತ್ತಾರೆ. ಮಾಧ್ಯಮಗಳಲ್ಲಿ ಮಾತ್ರ ಮುಖ್ಯಮಂತ್ರಿ ಬದಲಾವಣೆ ಆಗಲಿದ್ದಾರೆ ಎಂದು ಸುದ್ದಿ ಪ್ರಸಾರವಾಗುತ್ತಿದೆ ಎಂದಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬ್ರಿಟನ್ನಿಂದ ಮತ್ತೆ ಮಿಲಿಟರಿ ನೆರವು ಪಡೆದ ಉಕ್ರೇನ್!