Webdunia - Bharat's app for daily news and videos

Install App

ಸಂಸತ್ನಲ್ಲಿ ಅಧಿವೇಶನದ ಪ್ರಮುಖ ಅಂಶಗಳು ಇಂತಿವೆ

Webdunia
ಸೋಮವಾರ, 14 ಮಾರ್ಚ್ 2022 (08:25 IST)
ಸಂಸತ್ತಿನಲ್ಲಿ ಬಜೆಟ್ ಅಧಿವೇಶನವು ಇಂದಿನಿಂದ (ಮಾರ್ಚ್ 14) ಮತ್ತೆ ಆರಂಭವಾಗಲಿದೆ.
 

ಅಧಿವೇಶನದಲ್ಲಿ ನಿರುದ್ಯೋಗ, ಹಣದುಬ್ಬರ ಮತ್ತು ಉಕ್ರೇನ್ ಯುದ್ಧವನ್ನು ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿತು.

ಬಜೆಟ್ ಅಧಿವೇಶನವು ಈ ಮೊದಲು ಫೆಬ್ರುವರಿ 1ರಿಂದ 11ರವರೆಗೆ ನಡೆದಿತ್ತು. ಇಂದಿನಿಂದ ಮತ್ತೆ ಅರಂಭವಾಗಲಿರುವ ಅಧಿವೇಶನದ ಬಗ್ಗೆ ನೀವು ತಿಳಿಯಬೇಕಿರುವ 10 ಮುಖ್ಯ ಮಾಹಿತಿ ಇಲ್ಲಿದೆ.
1. ಭಾರತದಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಗಮನಾರ್ಹ ಪ್ರಮಾಣದಲ್ಲಿ ಕಡಿಮೆ ಆಗಿರುವುದರಿಂದ ಈ ಬಾರಿ ಸಂಸತ್ ಅಧಿವೇಶನದಲ್ಲಿ ನಿರ್ಬಂಧಗಳು ಮೊದಲಿನಷ್ಟು ಇರುವ ಸಾಧ್ಯತೆ ಕಡಿಮೆ.

2.  ಸೋನಿಯಾ ಗಾಂಧಿ ಅವರೊಂದಿಗೆ ಸಭೆಯ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ನಾವು ನಿರುದ್ಯೋಗ, ಹಣದುಬ್ಬರ ಮತ್ತು ಕನಿಷ್ಠ ಬೆಂಬಲ ಬೆಲೆ ವಿಚಾರವನ್ನು ಪ್ರಧಾನವಾಗಿ ಪ್ರಸ್ತಾಪಿಸಲಿದ್ದೇವೆ. ಉಕ್ರೇನ್ನಿಂದ ಬರುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳಿಗೆ ಕಾಯಕಲ್ಪ ಒದಗಿಸುವ ವಿಚಾರದ ಬಗ್ಗೆಯೂ ಮಾತನಾಡುತ್ತೇವೆ ಎಂದರು.

3. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಜಮ್ಮು ಮತ್ತು ಕಾಶ್ಮೀರದ ಬಜೆಟ್ ಅನ್ನೂ ಮಂಡಿಸಲಿದ್ದಾರೆ. 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಅಯವ್ಯಯವನ್ನು ವಿತ್ತ ಸಚಿವೆ ಮಂಡಿಸಲಿದ್ದಾರೆ ಎಂದು ಹಣಕಾಸು ಇಲಾಖೆಯ ಪ್ರಕಟಣೆ ತಿಳಿಸಿದೆ.

4.  ಬಜೆಟ್ ಅಧಿವೇಶನದ ಮೊದಲರ್ಧದಲ್ಲಿ ಈ ವರ್ಷದ ಮುಂಗಡ ಪತ್ರವನ್ನು ಕೇಂದ್ರ ಹಣಕಾಸು ಸಚಿವರು ಮಂಡಿಸಿದ್ದರು. ಮುಂದಿನ ಐದು ವರ್ಷಗಳ ಅವಧಿಯಲ್ಲಿ 60 ಲಕ್ಷ ಉದ್ಯೋಗ ಸೃಷ್ಟಿಸಲಾಗುವುದು ಎಂದು ವಿತ್ತ ಸಚಿವರು ಹೇಳಿದ್ದರು. ಈ ಬಜೆಟ್ ಭಾರತದ ಮುಂದಿನ 25 ವರ್ಷದ ಆರ್ಥಿಕ ಪ್ರಗತಿಯ ಹಾದಿ ತೋರಲಿದೆ. ಭಾರತವು ಸ್ವಾತಂತ್ರ್ಯ ಪಡೆದು 100 ವರ್ಷವಾಗುವ ಹೊತ್ತಿಗೆ ಹೇಗಿರಬೇಕು ಎಂಬುದನ್ನು ನಿರ್ಧರಿಸಲಿದೆ ಎಂದು ಹೇಳಿದ್ದರು.

5.  ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಭಾಷಣಕ್ಕೆ ವಂದನೆ ಸಲ್ಲಿಸುವ ನಿರ್ಣಯದ ಮೇಲಿನ ಚರ್ಚೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದರು. ‘ಭಾರತದ ಬಡವರು ದೇಶದ ಅತಿ ಶ್ರೀಮಂತ ನೂರು ಜನರು ದೇಶದ 55 ಕೋಟಿ ಜನರಿಗಿಂತಲೂ ಹೆಚ್ಚು ಆದಾಯ ಪಡೆದದ್ದನ್ನು ಗಮನಿಸಿದ್ದಾರೆ. ನಮ್ಮ ದೇಶ ಎಲ್ಲಿಗೆ ಬಂದು ನಿಂತಿದೆಯೋ ಅದರ ಬಗ್ಗೆ ತೀವ್ರ ಆತಂಕವಿದೆ. ದೇಶ ಮತ್ತು ದೇಶದ ಜನರು ದೊಡ್ಡ ಗಂಡಾಂತರದಲ್ಲಿದ್ದಾರೆ’ ಎಂದು ರಾಹುಲ್ ಹೇಳಿದ್ದರು. ಬಿಜೆಪಿ ಮತ್ತು ಆರ್ಎಸ್ಎಸ್ ದೇಶದ ತಳಪಾಯದೊಂದಿಗೆ ಆಟವಾಡುತ್ತಿವೆ ಎಂದಿದ್ದರು.

6. ರಾಹುಲ್ ಗಾಂಧಿ ಆರೋಪಗಳಿಗೆ ಉತ್ತರಿಸಿದ್ದ ಪ್ರಧಾನಿ ನರೇಂದ್ರ ಮೋದಿ, ‘ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ದುರಾಡಳಿತ ಮತ್ತು ಭ್ರಷ್ಟಾಚಾರವು ತಾಂಡವವಾಡುತ್ತಿತ್ತು’ ಎಂದು ಹೇಳಿದ್ದರು. ‘ಕುರುಡು ಪ್ರತಿಪಕ್ಷವು ದೇಶದ ಪ್ರಜಾಪ್ರಭುತ್ವವನ್ನು ಅಲುಗಾಡಿಸುತ್ತಿದೆ’ ಎಂದು ಹೇಳಿದ್ದರು.

7.  ‘ತುಕ್ಡೆ ತುಕ್ಡೆ ಗ್ಯಾಂಗ್ನೊಂದಿಗೆ ಕೈಜೋಡಿಸಿದ ನಂತರ ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿ ಸ್ಪಷ್ಟವಾಗಿ ಎಲ್ಲರಿಗೂ ಗೋಚರಿಸಿತು. ಹಲವು ಚುನಾವಣೆಗಳನ್ನು ಸೋತ ನಂತರವೂ ನಿಮ್ಮ ಅಹಂಕಾರ ಕಡಿಮೆಯಾಗಿಲ್ಲ. ಇದು ಎಂದಿಗೂ ಹೋಗುವುದಿಲ್ಲ, ಏಕೆಂದರೆ ನೀವು ರೂಪಿಸಿಕೊಂಡಿರುವ ವ್ಯವಸ್ಥೆ ಅದಕ್ಕೆ ಅವಕಾಶ ಕೊಡುವುದಿಲ್ಲ ಎಂದಿದ್ದರು.

8.  ಕಲಾಪ ನಡೆಯುವ ಸ್ಥಳ, ಗ್ಯಾಲರಿ ಮತ್ತು ಛೇಂಬರ್ಗಳಲ್ಲಿ ಸಾಮಾಜಿಕ ಅಂತರ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಮೊದಲ ಹಂತದ ಬಜೆಟ್ ಅಧಿವೇಶನದಲ್ಲಿ 11 ಕಲಾಪಗಳು ನಡೆದಿದ್ದವು.

9. ಬಜೆಟ್ ಅಧಿವೇಶನವು ಏಪ್ರಿಲ್ 8ಕ್ಕೆ ಕೊನೆಗೊಳ್ಳಲಿದೆ. ಎರಡನೇ ಹಂತದಲ್ಲಿ 19 ಕಲಾಪಗಳು ನಡೆಯಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments