ಇಂದು ಗುಡುಗು ಸಹಿತ ಧಾರಾಕಾರ ಮಳೆ ಸಾಧ್ಯತೆ

Webdunia
ಶನಿವಾರ, 16 ಅಕ್ಟೋಬರ್ 2021 (07:21 IST)
ಬೆಂಗಳೂರು(ಅ.16) : ನೈರುತ್ಯ ಮುಂಗಾರು ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತೀವ್ರವಾಗಿದ್ದು, ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಸಕ್ರಿಯವಾಗಿದೆ.

ಹಾಗಾಗಿ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ  ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.
ಎಲ್ಲೆಲ್ಲಿ ಮಳೆ ಸಾಧ್ಯತೆ?
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ  ಅಧಿಕ ಮಳೆಯ ನಿರೀಕ್ಷೆ ಇರುವುದರಿಂದ ಎರಡೂ ದಿನ ‘ಯೆಲ್ಲೊ ಅಲರ್ಟ್’ ಘೋಷಣೆ ಮಾಡಲಾಗಿದೆ.
ಕರ್ನಾಟಕ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿನ ಕಡಿಮೆ ಒತ್ತಡದ ಪ್ರದೇಶದ ಕಾರಣ, ರಾಜ್ಯದ ಕರಾವಳಿ ಭಾಗಗಳಲ್ಲಿ ಕೂಡ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಸೈಕ್ಲೋನಿಕ್ ಸರ್ಕ್ಯುಲೇಷನ್ ಅರೇಬಿಯನ್ ಸಮುದ್ರದ ಮೇಲೆ ಕರ್ನಾಟಕ ಕರಾವಳಿಯಲ್ಲಿದೆ ಮತ್ತು ಇನ್ನೊಂದು ಪರಿಚಲನೆಯು ಬಂಗಾಳ ಕೊಲ್ಲಿಯಲ್ಲಿದೆ, ಇದರ ಪ್ರಭಾವದ ಕಾರಣ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ನಿರೀಕ್ಷೆಯಿದ್ದು, ಅದು ಅಧಿಕ ಮಳೆಗೆ ಕಾರಣವಾಗಲಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Rahul Gandhi birthday: ಕೈಯಲ್ಲಿ ಕೊಡಲಿ, ಸಂವಿಧಾನ ಪುಸ್ತಕ, ಹಣೆಯಲ್ಲಿ ಭಸ್ಮ ಹಾಕಿದ ರಾಹುಲ್ ಗಾಂಧಿಗೆ ಗಂಗಾಭಿಷೇಕ

ವಿಧಾನಪರಿಷತ್ ಚುನಾವಣೆ ಗೆದ್ದ ತಕ್ಷಣ ಸಿಎಂ ಡಿಕೆ ಶಿವಕುಮಾರ್ ಮಾಡಿದ ಕೆಲಸವೇನು ಗೊತ್ತಾ

ಕೇರಳ ಅಪಘಾತದಲ್ಲಿ ಮಹಿಳೆಯ ಬಟ್ಟೆ ಹರಿದಾಗ ಈ ವ್ಯಕ್ತಿ ಧೋತಿ ಬಿಚ್ಚಿ ಮಾಡಿದ ಕೆಲಸಕ್ಕೆ ಎಲ್ಲರೂ ಶಾಕ್ Video

ಮುಂದಿನ ಸುದ್ದಿ
Show comments