Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ

ರಾಜ್ಯದಲ್ಲಿ ಮುಂದುವರಿಯಲಿದೆ ಗುಡುಗು ಸಹಿತ ಮಳೆ
ಬೆಂಗಳೂರು , ಶನಿವಾರ, 16 ಏಪ್ರಿಲ್ 2022 (07:18 IST)
ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 3 ದಿನಗಳೂ ಇದೇ ರೀತಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

ಉತ್ತರ ಒಳನಾಡಿನ ರಾಯಚೂರು, ಬೀದರ್ ಹಾಗೂ ಯಾದಗಿರಿ ಹೊರತುಪಡಿಸಿ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ. ಕರಾವಳಿಯ ಬಹುತೇಕ ಕಡೆ ಗುಡುಗು-ಸಿಡಿಲು ಸಹಿತ ಮಳೆ ಸುರಿಯಲಿದೆ ಎಂದು ತಿಳಿಸಿದೆ. 

ಬೆಂಗಳೂರಿನಲ್ಲಿ ಕಳೆದ 2 ದಿನಗಳಿಂದ ಮಳೆ ಸುರಿಯುತ್ತಿದ್ದು, ಇಂದು ಕೂಡಾ ಸಂಜೆ ವೇಳೆ ಭಾರೀ ಮಳೆ ಹಾಗೂ ಗುಡುಗು ಸಿಡಿಲಿನ ಮುನ್ಸೂಚನೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಏಡ್ಸ್ ರೋಗಿಗೆ ಜಾಮೀನು ನೀಡಿದ ಸುಪ್ರೀಂ