Webdunia - Bharat's app for daily news and videos

Install App

ಇಂದು ಮುರುಘಾ ಶ್ರೀಗಳ ಭವಿಷ್ಯ ನಿರ್ಧಾರ

Webdunia
ಸೋಮವಾರ, 5 ಸೆಪ್ಟಂಬರ್ 2022 (07:31 IST)
ಚಿತ್ರದುರ್ಗ : ಮುರುಘಾ ಶ್ರೀಗಳ ಪೊಲೀಸ್ ಕಸ್ಟಡಿ ಭಾನುವಾರಕ್ಕೆ ಅಂತ್ಯವಾಗಿದ್ದು ಜಾಮೀನು ಸಿಗುತ್ತಾ? ಅಥವಾ ನ್ಯಾಯಾಂಗ ಬಂಧನಕ್ಕೆ ಒಳಗಾಗುತ್ತಾರಾ ಎನ್ನುವುದು ಇಂದು ನಿರ್ಧಾರವಾಗಲಿದೆ.
 
ಲೈಂಗಿಕ ದೌರ್ಜನ್ಯ ಅಲ್ಲದೇ ಶ್ರೀಗಳ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಹೀಗಾಗಿ ಚಾರ್ಜ್ಶೀಟ್ ಸಲ್ಲಿಕೆಯಾಗುವವರೆಗೂ ಜಾಮೀನು ಸಿಗುವುದು ಅನುಮಾನ ಎನ್ನಲಾಗುತ್ತಿದೆ.

ಕಳೆದ 3 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದ ಶ್ರೀಗಳನ್ನು ಇಂದು ಬೆಳಗ್ಗೆ 11 ಗಂಟೆಗೆ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ. ಕಸ್ಟಡಿಗೆ ಪಡೆದ ಮೂರು ದಿನದಲ್ಲಿ ಸ್ಥಳ ಮಹಜರು ಸೇರಿದಂತೆ ಹಲವು ಪ್ರಕ್ರಿಯೆಗಳನ್ನು ಪೊಲೀಸರು ಮಾಡಿದ್ದಾರೆ.  

ಇಂದು ಶ್ರೀಗಳ ಪರ ವಕೀಲರು ಜಾಮೀನು ನೀಡುವಂತೆ ನ್ಯಾಯಾಧೀಶರ ಮುಂದೆ ಮನವಿ ಮಾಡಲಿದ್ದಾರೆ. ಅಲ್ಲದೇ ಆರೋಗ್ಯದ ಪರಿಸ್ಥಿತಿ ಸರಿಯಿಲ್ಲದ ಕಾರಣ ಬೆಂಗಳೂರಿನ ಜಯದೇವ ಇಲ್ಲ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲು ಅನುಮತಿಯನ್ನು ಕೂಡ ಕೇಳಲಿದ್ದಾರೆ.

ನ್ಯಾಯಾಲಯದಲ್ಲಿ ಶ್ರೀಗಳ ಜಾಮೀನು ಅರ್ಜಿ ಹಾಗೂ ಚಿಕಿತ್ಸೆಗೆ ಬೇರೆ ಕಡೆ ಹೋಗಲು ಅನುಮತಿಯನ್ನು ಪಡೆಯಲು ಮತ್ತೆ ಮನವಿ ಸಲ್ಲಿಸಲಾಗುತ್ತದೆ. ಇದಕ್ಕೆ ನ್ಯಾಯಾಧೀಶರು ಒಪ್ಪುತ್ತಾರಾ ಇಲ್ವಾ ಎಂಬುದು ಕುತೂಹಲವಾಗಿದೆ. ಜಾಮೀನು ಅರ್ಜಿ, ಚಿಕಿತ್ಸೆಗೆ ಮನವಿ ಅರ್ಜಿಯನ್ನು ನ್ಯಾಯಾಧೀಶರು ತಿರಸ್ಕರಿಸಿದರೆ ಮುರುಘಾ ಶರಣರಿಗೆ ಜೈಲುವಾಸ ಪಕ್ಕಾ ಆಗಲಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರಕಾಶಿ ಮೇಘಸ್ಫೋಟ, ವಯನಾಡು ದುರಂತವನ್ನು ನೆನಪಿಸುವಂತಿಗೆ ಭಯಾನಕ ವಿಡಿಯೋ

ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಇನ್ನಿಲ್ಲ, ಅವರ ರಾಜಕೀಯ ಹಾದಿ ಇಲ್ಲಿದೆ

ಧರ್ಮಸ್ಥಳ ಹಲವಾರು ಶವಗಳನ್ನು ಹೂತಿಟ್ಟ ಪ್ರಕರಣ: ಕಾಡಿನಲ್ಲಿ 7ನೇ ದಿನ ಹೇಗೇ ನಡೆಯುತ್ತಿದೆ ಕಾರ್ಯಚರಣೆ

ಸಾರಿಗೆ ನೌಕರರ ಮುಷ್ಕರ ತಕ್ಷಣ ಪರಿಹರಿಸಿ: ಡಾ.ಸಿ.ಎನ್.ಅಶ್ವತ್ಥನಾರಾಯಣ್

ನಮ್ಮ ಪರಿಸ್ಥಿತಿನೂ ಸ್ವಲ್ಪ ಅರ್ಥ ಮಾಡ್ಕೊಳ್ರಪ್ಪಾ: ಸಾರಿಗೆ ನೌಕರರಿಗೆ ಡಿಕೆ ಶಿವಕುಮಾರ್ ರಿಕ್ವೆಸ್ಟ್

ಮುಂದಿನ ಸುದ್ದಿ