Webdunia - Bharat's app for daily news and videos

Install App

ಇಂದು, ನಾಳೆಯೂ ಮುಂದುವರಿಯಲಿದೆ ಮಳೆ!

Webdunia
ಶನಿವಾರ, 20 ನವೆಂಬರ್ 2021 (13:25 IST)
ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹವಾಮಾನ  ವೈಪರಿತ್ಯ ಹಿನ್ನೆಲೆ ಬೆಂಗಳೂರು ಸೇರಿದಂತೆ ಮುಂದಿನ ಎರಡು ದಿನಗಳ ಕಾಲ ಮಳೆ  ಮುಂದುವರಿಯಲಿದೆ.
ಬೆಂಗಳೂರಿಗೆ ಜಿಟಿ ಜಿಟಿ ಮಳೆ ತಪ್ಪಿದಲ್ಲ. ಇನ್ನುಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದೆ. ಕೆಲವು ಕಡೆ ಗುಡುಗು-ಸಿಡಿಲು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಕೊಂಚ ಮಳೆಯ ಪ್ರಮಾಣ ಕೊಂಚ ಇಳಿಮುಖವಾಗುವ ಸಾಧ್ಯತೆಗಳಿವೆ. ಇತ್ತ ರಾಜ್ಯದ ಬಹುತೇಕ ಕೆರೆಗಳು  ಭರ್ತಿಯಾಗಿ ಕೋಡಿ ಬಿದ್ದು, ನೀರು ಹರಿಯುತ್ತಿದೆ.  ಇತ್ತ ನಿರಂತರ ಮಳೆ ಹಿನ್ನೆಲೆ ಕೃಷಿ ಭೂಮಿಯಲ್ಲಿ ನೀರು ಶೇಖರಣೆಯಾಗುತ್ತಿರುವ ಕಾರಣ ರೈತರು ಸಂಕಷ್ಟದಲ್ಲಿ ಸಿಲುಕಿದ್ದಾರೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ  ಮಳೆಯ ಪ್ರಮಾಣ ಹೆಚ್ಚಾಗಲಿದ್ದು, ಮುಂಜಾಗ್ರತ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ 13 ಜಿಲ್ಲೆಗಳಿಗೆ ಅಲರ್ಟ್  ಸಂದೇಶ ರವಾನಿಸಲಾಗಿದ್ದು, ಎಚ್ಚರಿಕೆಯ ಸಂದೇಶ ರವಾನಿಸಲಾಗಿದೆ.
ರಾಜ್ಯದ ಕರಾವಳಿ  ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಹಿಂಗಾರು ಅಬ್ಬರ ಮುಂದುವರಿಯಲಿದೆ.  ಶನಿವಾರದವರೆಗು ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ  ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments