ಮಕ್ಕಳಿಗೆ ಟೊಮೆಟೋ ಜ್ವರ : 80ಕ್ಕೂ ಹೆಚ್ಚು ಕೇಸ್ ಪತ್ತೆ!

Webdunia
ಗುರುವಾರ, 12 ಮೇ 2022 (12:07 IST)
ಕೊಚ್ಚಿ : ಈಗಲೂ ದೇಶದಲ್ಲಿ ಅತಿಹೆಚ್ಚು ಕೋವಿಡ್ ಸೋಂಕು ಮತ್ತು ಸಾವು ದಾಖಲಾಗುತ್ತಿರುವ ಕೇರಳದಲ್ಲಿ ಇದೀಗ ಟೊಮೆಟೊ ಜ್ವರ ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಅದರಲ್ಲೂ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ 80 ಮಕ್ಕಳಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ಪೋಷಕರಲ್ಲಿ ಆತಂಕ ಮನೆ ಮಾಡಿದೆ.

ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ವೈರಾಣು ಜ್ವರವಾದ ಇದು ಹೇಗೆ ಸೃಷ್ಟಿಯಾಗಿದೆ, ಕಾರಣ ಏನು? ಎಂಬ ಮಾಹಿತಿ ಇಲ್ಲ. ಈ ಬಗ್ಗೆ ಅಧ್ಯಯನ ನಡೆಸಲಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಆದರೆ ಆತಂಕ ಪಡುವ ಅಗತ್ಯವಿಲ್ಲ. ಇದು ಮಾರಣಾಂತಿಕವಲ್ಲ.

ಸೂಕ್ತ ಚಕಿತ್ಸೆ ಹಾಗೂ ಮುಂಜಾಗ್ರತಾ ಕ್ರಮ ಕೈಗೊಂಡು ರೋಗದಿಂದ ರಕ್ಷಣೆ ಪಡೆಯಬಹುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದೊಂದು ಅಪರೂಪದ ವೈರಲ್ ಜ್ವರವಾಗಿದ್ದು, ಮೈ ಮೇಲೆ ದದ್ದು (ರಾರಯಷಸ್), ಚರ್ಮದ ಉರಿ ಮತ್ತು ನಿರ್ಜಲೀಕರಣದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ದದ್ದುಗಳು ಕೆಂಪನೆಯ ಬಣ್ಣವಿದ್ದು, ಟೊಮೆಟೊಗೆ ಹೋಲುವ ಕಾರಣ, ಇದಕ್ಕೆ ಟೊಮೆಟೊ ಜ್ವರವೆಂದು ಹೆಸರು ಇದೆ.

ಜ್ವರ ಕಾಣಿಸಿಕೊಂಡವರಲ್ಲಿ ಟೊಮೆಟೊ ರೀತಿಯ ಗುಳ್ಳೆ, ಜ್ವರ, ಮೈಕೈ ನೋವು, ಸಂಧುಗಳಲ್ಲಿ ನೋವು, ಆಯಾಸ, ಬಳಲಿಕೆ ಕಾಣಿಸಿಕೊಳ್ಳುತ್ತದೆ. ಇದುವರೆಗೆ ಪತ್ತೆಯಾದ ಎಲ್ಲಾ 80 ಪ್ರಕರಣಗಳು ಕೇವಲ ಕೊಲ್ಲಂ ಜಿಲ್ಲೆಯೊಂದರಲ್ಲೇ ಕಾಣಿಸಿಕೊಂಡಿದೆ.

ಏನು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬಹುದು?

- ಮಕ್ಕಳಲ್ಲಿ ರೋಗ ಲಕ್ಷಣ ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು

- ಜ್ವರಪೀಡಿತ ಮಕ್ಕಳಿಗೆ ಸಾಧ್ಯವಾದಷ್ಟುಹೆಚ್ಚಿನ ಕಾಯಿಸಿ ಆರಿಸಿದ ನೀರು ಕುಡಿಸಬೇಕು

- ದದ್ದು ಅಥವಾ ಗುಳ್ಳೆಗಳನ್ನು ಕೆರೆಯುವುದಾಗಿ, ಒಡೆಯುವುದಾಗಲೀ ಮಾಡಬಾರದು

- ಜ್ವರ ಕಾಣಿಸಿಕೊಂಡವರು ಬಿಸಿ ನೀರಿನಲ್ಲಿ ಸ್ನಾನ ಮಾಡಬೇಕು

- ಜ್ವರ ಬಂದವರಿಂದ ಅಂತರ ಕಾಯ್ದುಕೊಳ್ಳಬೇಕು, ಹೆಚ್ಚು ವಿಶ್ರಾಂತಿ ಪಡೆಯಬೇಕು

ಕೇರಳದಲ್ಲಿ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ 80 ಮಕ್ಕಳಿಗೆ ಹೊಸ ರೀತಿಯ ವೈರಾಣು ಜ್ವರ ಹರಡಿದೆ. ಅದಕ್ಕೆ ಟೊಮೆಟೋ ಫ್ಮ್ಲ ಎಂದು ಹೆಸರಿಡಲಾಗಿದೆ. ಈ ಸೋಂಕು ತಗಲಿದ ಮಕ್ಕಳ ಮೈಮೇಲೆ ಟೊಮೆಟೋವನ್ನು ಹೋಲುವ ಕೆಂಪು ಗಂಟುಗಳಾಗುತ್ತವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ರಾಜ್ಯದ ಎಲ್ಲ ಸಮಸ್ಯೆಗೆ ನಾಟಿಕೋಳಿಯಲ್ಲಿ ಪರಿಹಾರವಿದೆಯೇ: ಎನ್.ರವಿಕುಮಾರ್ ಪ್ರಶ್ನೆ

ಶ್ರೀಲಂಕಾಗೆ ಸಹಾಯ ಮಾಡಲು ಹೋಗಿ ಮುಜುಗರಕ್ಕೀಡಾದ ಪಾಕಿಸ್ತಾನ, ಆಗಿದ್ದೇನು ಗೊತ್ತಾ

ಎರಡು ರಾತ್ರಿ ತೋಟದಲ್ಲೇ ಕಳೆದ ಮಗು, ಕೊನೆಗೂ ಹುಡುಕಿಕೊಟ್ಟ ಸಾಕು ನಾಯಿ

ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ, ದೆಹಲಿಗೆ ಆಗಮಿಸಿದ ರಷ್ಯಾದ ವಿಶೇಷ ಭದ್ರತಾ ಪಡೆ

ಮುಂದಿನ ಸುದ್ದಿ
Show comments