Webdunia - Bharat's app for daily news and videos

Install App

ತೀವ್ರ ಕುಸಿತ ಕಂಡ ಟೊಮೆಟೋ !

Webdunia
ಶನಿವಾರ, 26 ಫೆಬ್ರವರಿ 2022 (08:44 IST)
ಕೋಲಾರ : ಟೊಮೆಟೋ ಬೆಳೆ ಅಂದರೆ ಅದು ಕೆಂಪು ಚಿನ್ನದ ವಹಿವಾಟು, ಇನ್ನೊಂದು ಅರ್ಥದಲ್ಲಿ ಟೊಮೆಟೋ ಬೆಳೆಯೋದು ಜೂಜು ಎನ್ನಲಾಗುತ್ತದೆ.
 
ಆ ಬೆಳೆಯನ್ನು ನಂಬಿದ ಅದೆಷ್ಟೋ ರೈತರು ಕೈತುಂಬಾ ಹಣ ನೋಡಿದವರಿದ್ದಾರೆ, ಅಷ್ಟೇ ಮಂದಿ ಕೈಸುಟ್ಟುಕೊಂಡವರೂ ಇದ್ದಾರೆ. ಚಿನ್ನದ ನಾಡು ಕೋಲಾರದಲ್ಲಿ ಕೆಜಿಎಫ್ ಚಿನ್ನದ ಗಣಿ ಬಿಟ್ಟರೆ ಕೆಂಪು ಚಿನ್ನ ಎಂದು ಕರೆಯಲ್ಪಡುವ ಟೊಮೆಟೋ ಬೆಳೆ ಕೂಡ ಇಲ್ಲಿಯ ಜನರಿಗೆ ಒಂದು ಪ್ರಮುಖ ಬೆಳೆ.

ಜಿಲ್ಲೆಯೊಂದರಲ್ಲಿಯೇ ಅಂದಾಜು 46 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಟೊಮೆಟೋವನ್ನು ಬೆಳೆಯುತ್ತಾರೆ. ಬೇರೆ ಯಾವ ಜಿಲ್ಲೆಯಲ್ಲಿಯೂ ಬೆಳೆಯದಷ್ಟು ಟೊಮೆಟೋ ಇಲ್ಲಿಯ ರೈತರು ಬೆಳೆಯುತ್ತಾರೆ. ಇದಕ್ಕೆ ಕೋಲಾರದಲ್ಲಿ ಇರುವ ಎಪಿಎಂಸಿ ಮಾರುಕಟ್ಟೆ ಪ್ರಮುಖವಾಗಿದೆ. 

ಸಾವಿರಾರು ಸಂಖ್ಯೆಯಲ್ಲಿ ರೈತರು ತಾವು ಬೆಳೆದ ಟೊಮೆಟೋವನ್ನು ನಗರದ ಎಪಿಎಂಸಿ ಮಾರುಕಟ್ಟೆಗೆ ತರುತ್ತಾರೆ. ಆದರೆ ಕಳೆದ ತಿಂಗಳಲ್ಲಿ 15 ಕೆಜಿಯ ಒಂದು ಕ್ರೇಟ್ ಟೊಮೆಟೋ ಬೆಲೆ ಒಂದು ಸಾವಿರ ದಾಟಿತ್ತು. ಕೊರೊನಾ ಮತ್ತು ಅತಿಯಾದ ಮಳೆ ಬಳಿಕ ಕೆಲ ರೈತರು ಟೊಮೆಟೋ ಬೆಳೆಯಲ್ಲಿ ಕೈತುಂಬಾ ಹಣ ನೋಡಿದ್ದರು.

ಆದರೆ ಒಂದೇ ತಿಂಗಳ ಅಂತರದಲ್ಲಿ ಈಗ ಅದರ ಬೆಲೆ ಪಾತಾಳಕ್ಕೆ ಕುಸಿದಿದೆ. ಇದು ರೈತರಲ್ಲಿ ಆತಂಕಕ್ಕೆ ಕಾರಣವಾಗಿದ್ದು, 15 ಕೆಜಿಯ ಟೊಮೆಟೋ ಬಾಕ್ಸ್ 10 ರೂಪಾಯಿಂದ 100 ರೂಪಾಯಿಗೆ ಮಾರಾಟವಾಗುತ್ತಿದೆ. ಅಂದರೆ ಒಂದು ಕೆಜಿ ಟೊಮೆಟೋ ಬೆಲೆ ಕೇವಲ ಎರಡು ರೂಪಾಯಿಯಿಂದ ಆರಂಭವಾಗುತ್ತಿದೆ .

ಒಟ್ಟಿನಲ್ಲಿ ಟೊಮೆಟೋ ಬೆಳೆಯೇ ಹಾಗೇ ಒಂಥರಾ ಜೂಜಾಟದಂತೆ ಅಪರೂಪಕ್ಕೆ ಒಮ್ಮೆ ಕೆಂಪು ಚಿನ್ನದಲ್ಲಿ ಹಣ ಸಂಪಾದನೆಯಾದರೆ ಅತೀ ಹೆಚ್ವು ಸಲ ಬೆಲೆ ಕುಸಿತವೇ ಕಾಣಬೇಕಿದೆ. ಹೀಗಾಗಿ ಸರ್ಕಾರ ಕೂಡ ಟೊಮೆಟೋ ಬೆಳೆಗಾರ ಸಹಾಯಕ್ಕೆ ಬರಬೇಕು, ಟೊಮೆಟೋ ನಿಗಮ ಅಥವಾ ಮಂಡಳಿ ಸ್ಥಾಪನೆ ಮಾಡಬೇಕು ಎಂಬ ಕೂಗು ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments