Publish Date: Wed, 01 Jun 2022 (11:09 IST)
Updated Date: Wed, 01 Jun 2022 (11:32 IST)
ಉಡುಪಿ : ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರ್ಕಾರದ 8 ವರ್ಷದ ಸಾಧನೆಗಳ ಬಗ್ಗೆ ಹೇಳಿದರು. ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ.
ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ತಪ್ಪಿತಸ್ಥರನ್ನು ಹಾಗೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.
ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ಬಂದಿದೆ. ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಭರವಸೆ ಕೊಟ್ಟರು.
ಬಿಜೆಪಿ ಸರ್ಕಾರ ಬಂದರೆ ಲೋಕಾಯುಕ್ತವನ್ನು ಬಲಪಡಿಸುತ್ತವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ.