Select Your Language

Notifications

webdunia
webdunia
webdunia
webdunia

ರೈಲುಗಳ ಸೇವೆ ತಾತ್ಕಾಲಿಕ ರದ್ದು!

ರೈಲುಗಳ ಸೇವೆ ತಾತ್ಕಾಲಿಕ ರದ್ದು!
ಹುಬ್ಬಳ್ಳಿ , ಗುರುವಾರ, 2 ಡಿಸೆಂಬರ್ 2021 (16:35 IST)
ಹುಬ್ಬಳ್ಳಿ : ಈಗಾಗಲೇ ದೇಶಾದ್ಯಂತ ವರುಣನ ಅಬ್ಬರ ಜೋರಾಗಿದೆ. ಅಲ್ಲದೆ ಜವಾದ್ ಚಂಡಮಾರುತದ ಹಿನ್ನೆಲೆಯಲ್ಲಿ ಕೆಲವೊಂದು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ ನೈಋತ್ಯ ರೈಲ್ವೆ ಆದೇಶ ಹೊರಡಿಸಿದೆ.
ಡಿಸೆಂಬರ್ 03ರಂದು ರೈಲು ಸಂಖ್ಯೆ 22883 ಪುರಿ – ಯಶವಂತಪುರ ಗರೀಬ್ ರಥ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12245 ಹೌರಾ – ಯಶವಂತಪುರ ದುರೊಂತೋ ಎಕ್ಸ್ಪ್ರೆಸ್, ರೈಲು ಸಂಖ್ಯೆ 22817 ಹೌರಾ – ಮೈಸೂರು ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12863 ಹೌರಾ – ಯಶವಂತಪುರ ಎಕ್ಸ್ಪ್ರೆಸ್, ರೈಲು ಸಂಖ್ಯೆ 12889 ಟಾಟಾನಗರ – ಯಶವಂತಪುರ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, ರೈಲು ಸಂಖ್ಯೆ 12246 ಯಶವಂತಪುರ – ಹೌರಾ ದುರಾಂಟೊ ಎಕ್ಸ್ಪ್ರೆಸ್,12246 ಯಶವಂತಪುರ – ಹೌರಾ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್, 18048 ವಾಸ್ಕೋ-ಡ-ಗಾಮಾ – ಹೌರಾ ಅಮರಾವತಿ ಎಕ್ಸ್ಪ್ರೆಸ್,18464 ಕೆಎಸ್ಆರ್ ಬೆಂಗಳೂರು – ಭುವನೇಶ್ವರ ಪ್ರಶಾಂತಿ ಎಕ್ಸ್ಪ್ರೆಸ್ ಸೇವೆ ರದ್ದಾಗಿದೆ. 
ಇನ್ನೂ ಡಿ.4 ರಂದು ರೈಲು ಸಂಖ್ಯೆ 18463 ಭುಬನೇಶ್ವರ – ಕೆಎಸ್ಆರ್ ಬೆಂಗಳೂರು ಪ್ರಶಾಂತಿ ಎಕ್ಸ್ಪ್ರೆಸ್, 18637 ಹಟಿಯಾ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ಪ್ರೆಸ್ ಸೇವೆಯನ್ನು ತಾತ್ಕಾಲಿಕವಾಗಿ ರದ್ದು ಮಾಡಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗಡೆ ತಿಳಿಸಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಯಲಹಂಕ ಶಾಸಕರ ಹತ್ಯೆಗೆ ಸ್ಕೆಚ್ ಆರೋಪಿ ಅರೆಸ್ಟ್