ಹೇಗೆ ನಡೆಯಲಿದೆ ವಿಶ್ವಾಸ ಮತ ಯಾಚನೆ ಪ್ರಕ್ರಿಯೆ?

Webdunia
ಶನಿವಾರ, 19 ಮೇ 2018 (12:07 IST)
ಬೆಂಗಳೂರು: ಮೂರು ದಿನಗಳ ಸಿಎಂ ಯಡಿಯೂರಪ್ಪ ಸರ್ಕಾರ ಮುಂದುವರಿಯುತ್ತಾ ಎಂದು ಇಂದು ವಿಶ್ವಾಸ ಮತದ ಮೂಲಕ ನಿರ್ಣಯವಾಗಲಿದೆ. ಅಷ್ಟಕ್ಕೂ ವಿಶ್ವಾಸ ಮತ ನಡೆಯುವ ಪ್ರಕ್ರಿಯೆ ಹೇಗಿರುತ್ತದೆ ಗೊತ್ತಾ?

ಮೊದಲಿಗೆ ಸಿಎಂ ಯಡಿಯೂರಪ್ಪ ವಿಶ್ವಾಸ ಮತ ಪ್ರಸ್ತಾವನೆ ಸಲ್ಲಿಸುತ್ತಾರೆ. ‘ಬಿಎಸ್ ಯಡಿಯೂರಪ್ಪ ಎಂಬ ಹೆಸರಿನವಾದ ನನ್ನ ನೇತೃತ್ವದ ಸಚಿವ ಸಂಪುಟದ ಮೇಲೆ ವಿಶ್ವಾಸವಿಡುವಂತೆ ಕೋರುತ್ತೇನೆ’ ಎಂದು ಯಡಿಯೂರಪ್ಪ ಪ್ರಸ್ತಾವನೆ ಸಲ್ಲಿಸುತ್ತಾರೆ.

ಬಳಿಕ ಇದರ ಮೇಲೆ ಚರ್ಚೆ ನಡೆಸುವುದಾದರೆ ಅದಕ್ಕೆ ಅವಕಾಶವಿದೆ. ಅದಾದ ಬಳಿಕ ಪ್ರಸ್ತಾವನೆಯನ್ನು ಮತಕ್ಕೆ ಹಾಕಲಾಗುತ್ತದೆ. ಮೊದಲು ಪರ ಇರುವವರ ಲೆಕ್ಕ ಹಾಕಲಾಗುತ್ತದೆ.

ಇಲ್ಲಿ ಸೀಕ್ರೆಟ್ ವೋಟಿಂಗ್ ಇಲ್ಲ. ಹಾಗಾಗಿ ಪರ ಅಥವಾ ವಿರೋಧ ಇರುವ ಸದಸ್ಯರು ಕೈ ಎತ್ತುವ ಮೂಲಕ ಮತ ಚಲಾಯಿಸಬಹುದು. ಪ್ರಸ್ತಾವದ ಪರ ಹೆಚ್ಚು ಮತ ಬಂದರೆ ಯಡಿಯೂರಪ್ಪನವರು ವಿಶ್ವಾಸ ಮತ ಗೆದ್ದಂತೆ. ವಿರೋಧಕ್ಕೆ ಹೆಚ್ಚು ಮತ ಬಂದರೆ ಅಲ್ಲಿಗೆ ಸರ್ಕಾರ ವಿಶ್ವಾಸ ಮತ ಕಳೆದುಕೊಂಡಿದೆ ಎಂದರ್ಥ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೋ ಬ್ಯಾಕ್ ಗವರ್ನರ್: ಕಾಂಗ್ರೆಸ್ ನಿಂದ ಅಭಿಯಾನ

Karnataka Weather: ಈ ಬಾರಿ ಬೇಸಿಗೆ ಹೇಗಿರಲಿದೆ, ಹವಾಮಾನ ತಜ್ಞರ ಎಚ್ಚರಿಕೆ ಗಮನಿಸಿ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಮುಂದಿನ ಸುದ್ದಿ
Show comments