Webdunia - Bharat's app for daily news and videos

Install App

ತುಮಕೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ

Webdunia
ಶುಕ್ರವಾರ, 1 ಅಕ್ಟೋಬರ್ 2021 (14:35 IST)
ತುಮಕೂರು, ಅ 01 : ಬೆಂಗಳೂರು-ತುಮಕೂರು ರೈಲು ಮಾರ್ಗದ ವಿದ್ಯುದೀಕರಣ ಕಾಮಗಾರಿ ಮುಕ್ತಾಯಗೊಂಡಿದೆ. ಈ ಮಾರ್ಗದಲ್ಲಿ ಮೆಮು ರೈಲುಗಳನ್ನು ಓಡಿಸಲು ಇಲಾಖೆ ಚಿಂತನೆ ನಡೆಸಿದ್ದು, ಇದರಿಂದ ಉಭಯ ನಗರಗಳ ನಡುವೆ ಸಂಚಾರ ನಡೆಸುವ ಜನರಿಗೆ ಸಹಾಯಕವಾಗಲಿದೆ.

ಚಿಕ್ಕಬಣಾವರ-ಹುಬ್ಬಳ್ಳಿ ನಡುವಿನ ಮಾರ್ಗದ ವಿದ್ಯುದೀಕರಣ ಭಾಗವಾಗಿ ಬೆಂಗಳೂರು-ತುಮಕೂರು ನಡುವಿನ 69.47 ಕಿ. ಮೀ. ರೈಲು ಮಾರ್ಗವನ್ನು ವಿದ್ಯುದೀಕರಣ ಮಾಡಲಾಗಿದೆ. ಕಾಮಗಾರಿ ಪೂರ್ಣಗೊಂಡಿದ್ದು, ರೈಲುಗಳ ಪ್ರಾಯೋಗಿಕ ಸಂಚಾರ ನಡೆಯುತ್ತಿದೆ.
"ಕಾಮಗಾರಿ ಪೂರ್ಣಗೊಂಡ ಬಳಿಕ ಎಲೆಕ್ಟ್ರಿಕ್ ಲೋಕೋಮೋಟಿವ್ ಮೂಲಕ ಪ್ರಾಯೋಗಿಕ ಪರೀಕ್ಷೆಗಳನ್ನು ನಡೆಸಿ ದಾಖಲೆಗಳನ್ನು ಮಾಡಲಾಗುತ್ತಿದೆ. ರೈಲ್ವೆ ಸುರಕ್ಷತಾ ಆಯುಕ್ತರ ಪರಿಶೀಲನೆಗೆ ದಾಖಲೆಗಳ ಮೂಲಕ ಪ್ರಸ್ತಾವನೆ ಸಲ್ಲಿಸಲಾಗುತ್ತದೆ" ಎಂದು ಅಧಿಕಾರಿಗಳು ಹೇಳಿದ್ದಾರೆ.
ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗದ ಪರಿಶೀಲನೆ ನಡೆಸಿ ರೈಲು ಸಂಚಾರಕ್ಕೆ ಒಪ್ಪಿಗೆ ನೀಡಿದ ಬಳಿಕ ಮಾರ್ಗದಲ್ಲಿ ಮೆಮು ರೈಲುಗಳನ್ನು ಓಡಿಸಲಾಗುತ್ತದೆ ಎಂದು ನೈಋತ್ಯ ರೈಲ್ವೆಯ ಅಧಿಕಾರಿಗಳು ಹೇಳಿದ್ದಾರೆ. ಮೆಮು ರೈಲು ಸಂಚಾರ ಆರಂಭವಾದರೆ ಪ್ರತಿದಿನ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.
ಒಟ್ಟು 856.76 ಕೋಟಿ ಮೊತ್ತದಲ್ಲಿ ಚಿಕ್ಕಬಣಾವರ-ಹುಬ್ಬಳ್ಳಿ ರೈಲ್ವೆ ಮಾರ್ಗವನ್ನು ವಿದ್ಯುದೀಕರಣ ಮಾಡಲಾಗುತ್ತಿದೆ. ರೈಲ್ವೆ ವಿಕಾಸ ನಿಗಮ ಸೇರಿದಂತೆ ವಿವಿಧ ಸಂಸ್ಥೆಗಳು ವಿದ್ಯುದೀಕರಣ ಕಾಮಗಾರಿಯನ್ನು ಕೈಗೊಂಡಿವೆ.
2022ರ ಮಾರ್ಚ್ ವೇಳೆಗೆ ಬೀರೂರು-ಚಿಕ್ಕಜಾಜೂರು, ತುಮಕೂರು-ಕರಡಿ ಸೆಕ್ಷನ್ ವಿದ್ಯುದೀಕರಣ ಪೂರ್ಣಗೊಳ್ಳಲಿದೆ. ಚಿಕ್ಕಜಾಜೂರು-ಹುಬ್ಬಳ್ಳಿ ನಡುವಿನ ಕಾಮಗಾರಿ ನಡೆಯುತ್ತಿದೆ. 2022ರ ಡಿಸೆಂಬರ್ ವೇಳೆಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indus Water treaty: ಸಿಂಧೂ ನದಿ ಒಪ್ಪಂದ ಎಂದರೇನು, ಇದನ್ನ ಮಾಡಿದವರು ಯಾರು: ಪಾಕಿಸ್ತಾನಕ್ಕೆ ಆಗುವ ನಷ್ಟವೇನು

Pahalgram: ಸಕಲ ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್‌, ಭರತ್ ಭೂಷಣ್‌ಗೆ ಅಂತ್ಯಕ್ರಿಯೆ

Pehlagam ಪ್ರವಾಸಿಗರ ರಕ್ಷಣೆಗೆ ಹೋಗಿ ಜೀವ ಕಳೆದುಕೊಂಡ ಮುಸ್ಲಿಂ ಯುವಕ, ತಂದೆಯ ಮಾತು ಕೇಳಿದ್ರೆ ಮೈ ರೋಮಾಂಚನ

‌Pahalgam Terror Attack:ಸರ್ವಪಕ್ಷ ಸಭೆಗೂ ಮುನ್ನಾ ರಾಷ್ಟ್ರಪತಿಯನ್ನು ಭೇಟಿಯಾದ ಅಮಿತ್ ಶಾ

Pahalgam Terror Attack: ವಾಘಾ ಅಟ್ಟಾರಿ ಗಡಿ ಬಂದ್‌ನಿಂದ ಪಾಕ್‌ನ ಮೇಲೆ ಬೀರುವ ಪರಿಣಾಮಗಳು

ಮುಂದಿನ ಸುದ್ದಿ
Show comments