Select Your Language

Notifications

webdunia
webdunia
webdunia
webdunia

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಗೈರು ಹಾಜರಾದ ಇಬ್ಬರು ಯಾರು?!

ಪ್ರಮಾಣ ವಚನ ಕಾರ್ಯಕ್ರಮಕ್ಕೆ ಕೊನೆಯ ಕ್ಷಣದಲ್ಲಿ ಗೈರು ಹಾಜರಾದ ಇಬ್ಬರು ಯಾರು?!
ಬೆಂಗಳೂರು , ಗುರುವಾರ, 24 ಮೇ 2018 (08:48 IST)
ಬೆಂಗಳೂರು: ಸಿಎಂ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಪ್ರಧಾನಿ ಮೋದಿ ವಿರೋಧಿ ಬಣದಲ್ಲಿ ಗುರುತಿಸಿಕೊಂಡ ದೇಶದ ಎಲ್ಲಾ ರಾಜಕೀಯ ಪಕ್ಷಗಳ ನಾಯಕರೂ ಭಾಗವಹಿಸಿದ್ದರು.

ಆದರೆ ನಿರೀಕ್ಷೆಯ ಪಟ್ಟಿಯಲ್ಲಿದ್ದ ಇಬ್ಬರು ನಾಯಕರು ಸಮಾರಂಭಕ್ಕೆ ಆಗಮಿಸಿರಲಿಲ್ಲ. ತಮಿಳು ಸೂಪರ್ ಸ್ಟಾರ್ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಕೇಜ್ರಿವಾಲ್ ಕಾರ್ಯಕ್ರಮಕ್ಕೆ ಆಗಮಿಸಿರಲಿಲ್ಲ.

ಇವರಿಬ್ಬರಿಗೂ ಸಿಎಂ ಕುಮಾರಸ್ವಾಮಿ ಖುದ್ದು ಆಹ್ವಾನ ನೀಡಿದ್ದರು. ಹಾಗಿದ್ದರೂ ಇಬ್ಬರೂ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅವರಿಬ್ಬರ ಹೊರತಾಗಿ ಉಳಿದಂತೆ ಅಖಿಲೇಶ್ ಯಾದವ್, ಮಾಯಾವತಿ, ಮಮತಾ ಬ್ಯಾನರ್ಜಿ, ತೇಜಸ್ವಿ ಯಾದವ್,  ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಶರದ್ ಪವಾರ್ ಸೇರಿದಂತೆ ಕೇಂದ್ರ ಸರ್ಕಾರದ ವಿರೋಧಿ ಪಕ್ಷಗಳ ನಾಯಕರೆಲ್ಲರೂ ಆಗಮಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಹೆಚ್‌‌.ಡಿ ಕುಮಾರಸ್ವಾಮಿಯವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ನಿರ್ಮಾಪಕಿ ಶಿಲ್ಪಾ ಗಣೇಶ್