Webdunia - Bharat's app for daily news and videos

Install App

ಬಾಲ ಪುರಸ್ಕಾರಕ್ಕೆ ಇಬ್ಬರು ಪ್ರತಿಭೆಗಳು ಆಯ್ಕೆ

Webdunia
ಸೋಮವಾರ, 24 ಜನವರಿ 2022 (16:17 IST)
ಬೆಂಗಳೂರು : ದೇಶದ 29 ಸಾಧಕ ಮಕ್ಕಳಿಗೆ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಪ್ರದಾನ ಮಾಡಿದರು.
 
ವಿವಿಧ ವಿಭಾಗಗಳಲ್ಲಿ ಸಾಧನೆಗೈದ ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದ್ದು, ರಾಜ್ಯದ ಇಬ್ಬರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿದ್ದಾರೆ. ಸಂಗೀತ ಮತ್ತು ಮನರಂಜನೆ ವಿಭಾಗದಲ್ಲಿ (ಪಿಯಾನೋ) ಸೈಯದ್ ಫತ್ತಿನ್ ಅಹಮದ್ ಹಾಗೂ ಸಮಾಜ ಸೇವೆ ವಿಭಾಗದಲ್ಲಿ ಅಭಿನವ್ ಚೌಧರಿಗೆ ವರ್ಚ್ಯುವಲ್ ಸಭೆಯ ಮೂಲಕ ಬಾಲ ಪುರಸ್ಕಾರ ಪ್ರಶಸ್ತಿ ನೀಡಿ ಪ್ರಧಾನಿ ನರೇಂದ್ರ ಮೋದಿ ಗೌರವಿಸಿದರು. 
 
ಪ್ರಶಸ್ತಿ ಜೊತೆಗೆ ಬ್ಲಾಕ್ ಚೈನ್ ತಂತ್ರಜ್ಞಾನದ ಡಿಜಿಟಲ್ ಸರ್ಟಿಫಿಕೇಟ್ ನೀಡಲಾಯಿತು. ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಾಧಕ ವಿದ್ಯಾರ್ಥಿಗಳನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಸನ್ಮಾನಿಸಿದರು.
 
ಸಂಶೋಧನೆ, ಸಮಾಜಸೇವೆ, ಶಾಲಾ ಸಾಧನೆ, ಕ್ರೀಡೆ, ಕಲೆ, ಸಂಸ್ಕೃತಿ, ಧೈರ್ಯ- ಸಾಹಸ ಕ್ಷೇತ್ರದಲ್ಲಿ ಸಾಧನೆಗೈದ ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗುತ್ತದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments