Publish Date: Wed, 07 Sep 2022 (10:57 IST)
Updated Date: Wed, 07 Sep 2022 (10:59 IST)
ಬೆಂಗಳೂರು : ಸಚಿವ ಉಮೇಶ್ ಕತ್ತಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಮಳೆ ಹಾನಿ ವೀಕ್ಷಣೆ ಮೊಟಕುಗೊಳಿಸಿ ಸಿಎಂ ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಉಮೇಶ್ ಕತ್ತಿ ತಲೆ ಸವರಿ ಭಾವುಕರಾದರು. ಅಲ್ಲದೆ ಕತ್ತಿ ಜೊತೆಗಿನ ಒಡನಾಟ ನೆನೆದು ಸಿಎಂ ಕಣ್ಣೀರು ಹಾಕಿದ್ದಾರೆ.
ಬಳಿಕ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ಹಿರಿಯ ಧುರೀಣನನ್ನು ಕಳೆದುಕೊಂಡಿದೆ. ಉತ್ತರ ಕರ್ನಾಟಕದ ಧ್ವನಿ ನಿಂತು ಹೋಗಿದೆ. ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟವಾಗಿದೆ. ಆತ್ಮೀಯ ಸಹೋದರನ್ನು ಕಳೆದುಕೊಂಡಿದ್ದೇನೆ ಎಂದು ಸಿಎಂ ಬೇಸರ ವ್ಯಕ್ತಪಡಿಸಿದರು.