Webdunia - Bharat's app for daily news and videos

Install App

ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಅಶ್ವಥ್ ನಾರಾಯಣ

Webdunia
ಭಾನುವಾರ, 10 ಜುಲೈ 2022 (07:57 IST)
ಬೆಂಗಳೂರು : 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
 
ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ.

ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. 

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಸ್ಪತ್ರೆಗೆ ತಂದಿದ್ದ 4ಲಕ್ಷದ ಚಿನ್ನವಿದ್ದ ಬ್ಯಾಗ್ ಎದ್ದು ನೋಡಿದಾಗ ನಾಪತ್ತೆ, ಹುಡುಕಾಟ ನಡೆಸಿದಾಗ ನಾಯಿ ಬುದ್ದಿ ಬಟಾಬಯಲು, Video

ಉಡುಪಿ: ದೇವಾಲಯದ ಕೊಳದಲ್ಲಿ ಮುಳುಗಿ 9ನೇ ತರಗತಿಯ ಬಾಲಕ ಸಾವು

ಜವರಾಯನ ರೂಪದಲ್ಲಿ ಬಂದ ಬಲೆನೋ, ಅಪಘಾತದ ರಭಸಕ್ಕೆ ಹೇರ್‌ಸ್ಟೈಲಿಸ್ಟ್‌ ಸಾವು, Video

ನೋಂದಣಿ ನೇಮ್ ಪ್ಲೇಟ್ ಕಾಣದಂತೆ ಸ್ಟಿಕ್ಟರ್ ಅಳವಡಿಸಿ ಓಡಾಡಿಸುತ್ತಿದ್ದ ವಾಹನಗಳಿಗೆ ದಂಡ

ಲೂಟಿ ಮಾಡಿದ ಹಣ ರಾಹುಲ್ ಗಾಂಧಿಯವರ ಮನೆಗೆ: ಬಿ.ಶ್ರೀರಾಮುಲು

ಮುಂದಿನ ಸುದ್ದಿ
Show comments