Webdunia - Bharat's app for daily news and videos

Install App

ರಾಜ್ಯಕ್ಕೆ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ : ಅಶ್ವಥ್ ನಾರಾಯಣ

Webdunia
ಭಾನುವಾರ, 10 ಜುಲೈ 2022 (07:57 IST)
ಬೆಂಗಳೂರು : 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ ಮತ್ತು ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.
 
ರಾಜ್ಯದ ಎಲ್ಲಾ ವಿ.ವಿ.ಗಳು ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ.

ಇದೇ ರೀತಿಯಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ ಎಂದಿದ್ದಾರೆ. 

ಇದುವರೆಗೂ ರಾಜ್ಯದಲ್ಲಿ ಒಂದೊಂದು ವಿ.ವಿ.ಯೂ ತಮ್ಮ ಅನುಕೂಲಕ್ಕೆ ತಕ್ಕಂತೆ ಶೈಕ್ಷಣಿಕ ವೇಳಾಪಟ್ಟಿ ರೂಪಿಸಿಕೊಳ್ಳುತ್ತಿದ್ದವು. ಇದರಿಂದಾಗಿ ವಿದ್ಯಾರ್ಥಿಗಳಿಗೆ ಗೊಂದಲ ಮತ್ತು ಅನನುಕೂಲ ಆಗುತ್ತಿತ್ತು. ಇದನ್ನು ಗಮನಿಸಿ ಈ ಏಕರೂಪದ ವೇಳಾಪಟ್ಟಿಯನ್ನು ತರಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇನಾ ಶಿಬಿರದ ಮೇಲೆ ಭೂಕುಸಿತ: ಮೂವರ ಮೃತದೇಹ ಹೊರಕ್ಕೆ, ಹಲವರು ಸಿಲುಕಿರುವ ಶಂಕೆ

ಕೊಲೆ ಪ್ರಕರಣದ ಆರೋಪಿಗಳಿಗೆ ಮತೀಯ ಸಂಘನೆಯ ನಂಟು: ದಕ ಜಿಲ್ಲಾ ಎಸ್ಪಿ ಕೆ ಅರುಣ್‌

Covid 19: ಒಂದೇ ದಿನ ದೇಶದಲ್ಲಿ ದಾಖಲಾದ ಪ್ರಕರಣಗಳ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

Arunachal Pradesh: ಪ್ರವಾಹದ ನಡುವೆ ತೂಗಾಡುತ್ತಿರುವ ಸೇತುವೆ ದಾಟುತ್ತಿರುವ ಯುವಕನ ಮೈ ಝುಂ ಎನಿಸುವ ವಿಡಿಯೋ

ದೇಶದಾದ್ಯಂತ ಹೆಚ್ಚುತ್ತಲೇ ಇದೆ ಕೋವಿಡ್‌ ಕೇಸ್‌: ಕೇರಳದಲ್ಲೇ 1,400ಕ್ಕೂ ಅಧಿಕ ಸಕ್ರಿಯ ಪ್ರಕರಣ

ಮುಂದಿನ ಸುದ್ದಿ
Show comments