Webdunia - Bharat's app for daily news and videos

Install App

ಕೇಂದ್ರ ಬಜೆಟ್ : ಭಾರೀ ನಿರೀಕ್ಷೆಯಲ್ಲಿ ನಾಗರಿಕರು

Webdunia
ಬುಧವಾರ, 1 ಫೆಬ್ರವರಿ 2023 (10:24 IST)
ಬೆಂಗಳೂರು : ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ 2023-24ನೇ ಸಾಲಿನ ಕೇಂದ್ರ ಬಜೆಟ್ಗೆ ವೇದಿಕೆ ಸಿದ್ಧವಾಗಿದೆ.

ಸಂಸತ್ ಭವನದಲ್ಲಿ ಬುಧವಾರ ಬೆಳಗ್ಗೆ 11 ಗಂಟೆಗೆ ಬಜೆಟ್ ಮಂಡನೆ ಮಾಡಲಿದ್ದಾರೆ. 2024ರ ಲೋಕಸಭಾ ಚುನಾವಣೆಯ ಮುನ್ನ ನಡೆಯುವ ಪೂರ್ಣ ಪ್ರಮಾಣದ ಕೇಂದ್ರ ಬಜೆಟ್ ಆಗಿರುವುದರಿಂದ ಜನರು ಬಹು ನೀರಿಕ್ಷೆಗಳನ್ನು ಹೊಂದಿದ್ದಾರೆ.

ಮಹಿಳೆಯ ಪರವಾಗಿ ಬಜೆಟ್ ಇರಲಿ

ಪ್ರತಿಯೊಬ್ಬರ ಅದರಲ್ಲೂ ಮಧ್ಯಮ ವರ್ಗದವರ, ಬಡವರ ಮಾತುಗಳು ಇವು. ಗ್ಯಾಸ್ ಬೆಲೆ 1,100 ರೂ. ಆಗಿದೆ. ಸಬ್ಸಿಡಿ ಎಂದು ಹೇಳಿ ಅದು ಬರುತ್ತಿಲ್ಲ. ಮನೆಗೆ ಬೇಕಾದ ಆಹಾರ ಪದಾರ್ಥಗಳ ಬೆಲೆ ಗಗನಕ್ಕೇರಿದೆ ಪ್ರತಿನಿತ್ಯದ ಜೀವನಕ್ಕೆ ಸಾವಿರಾರು ರೂ. ಬೇಕಾಗುತ್ತಿದೆ. ಸರ್ಕಾರ ಈ ಬಾರಿಯಾದರೂ ಅಗತ್ಯ ವಸ್ತುಗಳ ಬೆಲೆಯನ್ನು ಕಡಿಮೆ ಮಾಡಿಸಿ ಎಂಬುದು ಮಹಿಳೆಯರ ನಿರೀಕ್ಷೆಯಾಗಿದೆ.

ಬಡವರ ಪರವಾಗಿ ನಿಲ್ಲಿ, ತೆರಿಗೆ ಕಡಿಮೆ ಮಾಡಿ

ಬಡವರು, ದಿನಗೂಲಿ ನೌಕರರು ಇಂದಿನ ಪರಿಸ್ಥಿತಿಯಲ್ಲಿ ಜೀವನ ಸಾಗಿಸುವುದೇ ಕಷ್ಟಕರವಾಗಿದೆ. ಆಟೋ ಚಾಲಕರಿಗೆ ಇಲ್ಲಿಯವರೆಗೆ ಯಾವುದೇ ಸರ್ಕಾರ ಯಾವುದೇ ಕೊಡುಗೆ ನೀಡಿಲ್ಲ. ಗ್ಯಾಸ್, ಪೆಟ್ರೋಲ್, ಡೀಸೆಲ್ ಎಲ್ಲದರ ಬೆಲೆ ಹೆಚ್ಚಾಗಿದೆ. ಇದಕ್ಕೆ ಬಜೆಟ್ನಲ್ಲಿ ಪರಿಹಾರ ಕೊಡಿಸಲು ಒತ್ತಾಯಿಸಿದ್ದಾರೆ. 

ಮಹಿಳೆಯರ ಶಿಕ್ಷಣ ರಕ್ಷಣೆಗೆ ಒತ್ತು

ಮಹಿಳೆಯ ಹಾಗೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೆರವು ನೀಡಿ, ಹೆಣ್ಣು ಮಕ್ಕಳ ಶಿಕ್ಷಣವನ್ನು ಉಚಿತವಾಗಿ ನೀಡಿ. ಆಗ ಶೇ.100 ರಷ್ಟು ಸಾಕ್ಷರತೆ ಪ್ರಮಾಣ ಬರಲಿದೆ. ಜೊತೆಗೆ ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಿ. ಇಡೀ ವಿಶ್ವದ ಜನರು ಬೆಂಗಳೂರಿನ ಕಡೆ ಬರುತ್ತಿದ್ದಾರೆ. ಬೇಸಿಕ್ ನೀಡ್ಸ್ ಬಗ್ಗೆ ಗಮನ ಹರಿಸಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಮುಂದಿನ ಸುದ್ದಿ
Show comments