Select Your Language

Notifications

webdunia
webdunia
webdunia
webdunia

ಬೆದರಿಕೆ ಕರೆ ಬಂದಿರುವ ಕಾರಣ ಪೊಲೀಸರಿಗೆ ದೂರು ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ

ಬೆದರಿಕೆ ಕರೆ ಬಂದಿರುವ ಕಾರಣ ಪೊಲೀಸರಿಗೆ ದೂರು ನೀಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ
ಕಾರಾವಾರ , ಸೋಮವಾರ, 23 ಏಪ್ರಿಲ್ 2018 (07:02 IST)
ಕಾರಾವಾರ: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರಿಗೆ ಕೊಲೆ ಮಾಡುವುದಾಗಿ ಬೆದರಿಕೆ ಕರೆ ಬಂದಿರುವ ಹಿನ್ನಲೆಯಲ್ಲಿ ಇದೀಗ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಸಚಿವರ ಮೊಬೈಲ್ ನಂಬರ್ ಹಾಗೂ ಲ್ಯಾಂಡ್ ಲೈನ್ ನಂಬರಿಗೆ ಮೂರು ಬಾರಿ ಕರೆ ಮಾಡುವುದರ ಮೂಲಕ ಕೊಲೆ ಬೆದರಿಕೆ ಹಾಕಲಾಗಿದೆ. ಕರೆ ಮಾಡಿದ ದುಷ್ಕರ್ಮಿಗಳು ಸಚಿವರಿಗೆ ,ನೀನು ದೊಡ್ಡ ಲೀಡರಾ? ನಿನ್ನ ತಲೆ ಕಡಿದು ಹಾಕುತ್ತೇನೆ, ದೇಹವನ್ನ ತುಂಡು ಮಾಡುತ್ತೇನೆ ಎಂದು ಬೆದರಿಸಿದ್ದಾರೆ. 


ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಸುರೇಶ್ ಶಟ್ಟಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504 ಹಾಗೂ 507 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಮುಖ್ಯಮಂತ್ರಿಯಾದವರು ಎರಡು ಕ್ಷೇತ್ರದಿಂದ ಸ್ಪರ್ಧಿಸುವುದು ತಪ್ಪೇನಲ್ಲ- ಮಲ್ಲಿಕಾರ್ಜುನ ಖರ್ಗೆ