Webdunia - Bharat's app for daily news and videos

Install App

ವಿಧಾನ ಪರಿಷತ್ ಕಲಾಪದಲ್ಲಿ ಗಲಾಟೆ

Webdunia
ಬುಧವಾರ, 9 ಮಾರ್ಚ್ 2022 (14:36 IST)
ಬೆಂಗಳೂರು : ವಿಧಾನ ಪರಿಷತ್ ಕಲಾಪದಲ್ಲಿ ಇಂದು 420 ವಿಷಯದ ಕುರಿತು ಚರ್ಚೆ ನಡೆಯಿತು.

ಈ ವೇಳೆ ಗಲಾಟೆಯಾದ ಪ್ರಸಂಗವೂ ನಡೆಯಿತು. ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯ್ತು. ಬಜೆಟ್ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಹರಿಪ್ರಸಾದ್ ಇಂಗ್ಲಿಷ್ನಲ್ಲಿ ಕೆಲ ವಿಷಯ ಪ್ರಸ್ತಾಪ ಮಾಡಿದರು.

ಈ ವೇಳೆ ಎದ್ದು ನಿಂತ ಬಿಜೆಪಿ ಸದಸ್ಯ ಪ್ರಾಣೇಶ್, ಸ್ವಲ್ಪ ಕನ್ನಡದಲ್ಲಿ ಮಾತಾಡೋಕೆ ಹೇಳಿ. ನಮಗೆ ಏನು ಅರ್ಥ ಆಗ್ತಿಲ್ಲ ಎಂದು ಸಭಾಪತಿಗಳಿಗೆ ಮನವಿ ಮಾಡಿದರು.

ಇದಕ್ಕೆ ಹರಿಪ್ರಸಾದ್ ನನಗೆ ಹಿಂದಿ, ಸಂಸ್ಕೃತ, ಇಂಗ್ಲಿಷ್ ಮಾತಾಡೋಕೆ ಬರುತ್ತೆ ಎಂದರು. ಈ ವೇಳೆ ಕನ್ನಡ, ಇಂಗ್ಲಿಷ್ನಲ್ಲಿ ಮಾತಾಡಿ ಹಿಂದಿ ಬೇಡ ಎಂದ ಸಭಾಪತಿ ಸಲಹೆ ನೀಡಿದರು. ಆಗ ಪ್ರಾಣೇಶ್ ನಮಗೆ ಟ್ರಾನ್ಸ್ಲೇಟರ್ ಕೊಡಿ ಎಂದು ಮನವಿ ಮಾಡಿದರು.

ಬಳಿಕ ಮಾತು ಮುಂದುವರೆಸಿದ ಹರಿಪ್ರಸಾದ್, ನೀವು 430 ಅಂಶಗಳನ್ನು ಬಜೆಟ್ ಪುಸ್ತಕದಲ್ಲಿ ಮುದ್ರಿಸಿದ್ದೀರಾ. ಇದನ್ನು 420 ಎಂದು ಮಾಡಬೇಕಿತ್ತು ಎಂದರು. ಹರಿಪ್ರಸಾದ್ ಮಾತಿಗೆ ಬಿಜೆಪಿ ರವಿಕುಮಾರ್ ವಿರೋಧ ವ್ಯಕ್ತಪಡಿಸಿದರು. ಹರಿಪ್ರಸಾದ್ ಹೀಗೆ ಮಾತಾಡೋದು ಸರಿಯಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು 420 ಅಂತ ಸೇರಿಸಿ ಅನ್ನೋದು ಸರಿಯಲ್ಲ. 420 ಯಾರು ಗೊತ್ತಿದೆ ಬಿಡಿ ಎಂದು ಹರಿಪ್ರಸಾದ್ಗೆ ತಿವಿದರು.

ಈ ವೇಳೆ ಮತ್ತೆ ಮಾತು ಮುಂದುವರಿಸಿದ ಹರಿಪ್ರಸಾದ್, ಪದೇ ಪದೇ ನನ್ನ ಮಾತಿಗೆ ಬಿಜೆಪಿಯವರು ಅಡ್ಡಿಪಡಿಸುತ್ತಿದ್ದಾರೆ. ಹೀಗೆ ಅಡ್ಡ ಮಾಡಿ ಅಂತ ಅವರ ಅಧ್ಯಕ್ಷರು ಹೇಳಿ ಕಳಿಸಿದ್ದಾರೆ ಎಂದು ಆರೋಪ ಮಾಡಿದರು. ಇದಕ್ಕೆ ಪ್ರಾಣೇಶ್, ನಮ್ಮಲ್ಲಿ ನಿಮಗಿಂತ ಚೆನ್ನಾಗಿ ಮಾತಾಡೋರು ಇದ್ದಾರೆ.

ನಿಮ್ಮ ಭಾಷಣಕ್ಕೆ ಯಾಕೆ ಅಡ್ಡಿ ಮಾಡೋಣ. ನಾವು ಹಿಂಬಾಗಿಲ ಮೂಲಕ ಶಾಸಕರು ಆಗಿಲ್ಲ. ನಾವು ಮುಂಬಾಗಿಲ ಮೂಲಕ ಇಲ್ಲಿಗೆ ಬಂದಿದ್ದೇವೆ. ಹಿಂಬಾಗಿಲ ಮೂಲಕ ಬಂದಿಲ್ಲ ಅಂತ ಹರಿಪ್ರಸಾದ್ರಿಗೆ ಚಾಟಿ ಬೀಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments