Webdunia - Bharat's app for daily news and videos

Install App

ವಿಧಾನ ಪರಿಷತ್ ಕಲಾಪದಲ್ಲಿ ಗಲಾಟೆ

Webdunia
ಬುಧವಾರ, 9 ಮಾರ್ಚ್ 2022 (14:36 IST)
ಬೆಂಗಳೂರು : ವಿಧಾನ ಪರಿಷತ್ ಕಲಾಪದಲ್ಲಿ ಇಂದು 420 ವಿಷಯದ ಕುರಿತು ಚರ್ಚೆ ನಡೆಯಿತು.

ಈ ವೇಳೆ ಗಲಾಟೆಯಾದ ಪ್ರಸಂಗವೂ ನಡೆಯಿತು. ಕಾಂಗ್ರೆಸ್-ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿಗೆ ಕಾರಣವಾಯ್ತು. ಬಜೆಟ್ ಮೇಲಿನ ಚರ್ಚೆ ವೇಳೆ ವಿಪಕ್ಷ ನಾಯಕ ಹರಿಪ್ರಸಾದ್ ಇಂಗ್ಲಿಷ್ನಲ್ಲಿ ಕೆಲ ವಿಷಯ ಪ್ರಸ್ತಾಪ ಮಾಡಿದರು.

ಈ ವೇಳೆ ಎದ್ದು ನಿಂತ ಬಿಜೆಪಿ ಸದಸ್ಯ ಪ್ರಾಣೇಶ್, ಸ್ವಲ್ಪ ಕನ್ನಡದಲ್ಲಿ ಮಾತಾಡೋಕೆ ಹೇಳಿ. ನಮಗೆ ಏನು ಅರ್ಥ ಆಗ್ತಿಲ್ಲ ಎಂದು ಸಭಾಪತಿಗಳಿಗೆ ಮನವಿ ಮಾಡಿದರು.

ಇದಕ್ಕೆ ಹರಿಪ್ರಸಾದ್ ನನಗೆ ಹಿಂದಿ, ಸಂಸ್ಕೃತ, ಇಂಗ್ಲಿಷ್ ಮಾತಾಡೋಕೆ ಬರುತ್ತೆ ಎಂದರು. ಈ ವೇಳೆ ಕನ್ನಡ, ಇಂಗ್ಲಿಷ್ನಲ್ಲಿ ಮಾತಾಡಿ ಹಿಂದಿ ಬೇಡ ಎಂದ ಸಭಾಪತಿ ಸಲಹೆ ನೀಡಿದರು. ಆಗ ಪ್ರಾಣೇಶ್ ನಮಗೆ ಟ್ರಾನ್ಸ್ಲೇಟರ್ ಕೊಡಿ ಎಂದು ಮನವಿ ಮಾಡಿದರು.

ಬಳಿಕ ಮಾತು ಮುಂದುವರೆಸಿದ ಹರಿಪ್ರಸಾದ್, ನೀವು 430 ಅಂಶಗಳನ್ನು ಬಜೆಟ್ ಪುಸ್ತಕದಲ್ಲಿ ಮುದ್ರಿಸಿದ್ದೀರಾ. ಇದನ್ನು 420 ಎಂದು ಮಾಡಬೇಕಿತ್ತು ಎಂದರು. ಹರಿಪ್ರಸಾದ್ ಮಾತಿಗೆ ಬಿಜೆಪಿ ರವಿಕುಮಾರ್ ವಿರೋಧ ವ್ಯಕ್ತಪಡಿಸಿದರು. ಹರಿಪ್ರಸಾದ್ ಹೀಗೆ ಮಾತಾಡೋದು ಸರಿಯಲ್ಲ. ಜವಾಬ್ದಾರಿ ಸ್ಥಾನದಲ್ಲಿ ಇರುವವರು 420 ಅಂತ ಸೇರಿಸಿ ಅನ್ನೋದು ಸರಿಯಲ್ಲ. 420 ಯಾರು ಗೊತ್ತಿದೆ ಬಿಡಿ ಎಂದು ಹರಿಪ್ರಸಾದ್ಗೆ ತಿವಿದರು.

ಈ ವೇಳೆ ಮತ್ತೆ ಮಾತು ಮುಂದುವರಿಸಿದ ಹರಿಪ್ರಸಾದ್, ಪದೇ ಪದೇ ನನ್ನ ಮಾತಿಗೆ ಬಿಜೆಪಿಯವರು ಅಡ್ಡಿಪಡಿಸುತ್ತಿದ್ದಾರೆ. ಹೀಗೆ ಅಡ್ಡ ಮಾಡಿ ಅಂತ ಅವರ ಅಧ್ಯಕ್ಷರು ಹೇಳಿ ಕಳಿಸಿದ್ದಾರೆ ಎಂದು ಆರೋಪ ಮಾಡಿದರು. ಇದಕ್ಕೆ ಪ್ರಾಣೇಶ್, ನಮ್ಮಲ್ಲಿ ನಿಮಗಿಂತ ಚೆನ್ನಾಗಿ ಮಾತಾಡೋರು ಇದ್ದಾರೆ.

ನಿಮ್ಮ ಭಾಷಣಕ್ಕೆ ಯಾಕೆ ಅಡ್ಡಿ ಮಾಡೋಣ. ನಾವು ಹಿಂಬಾಗಿಲ ಮೂಲಕ ಶಾಸಕರು ಆಗಿಲ್ಲ. ನಾವು ಮುಂಬಾಗಿಲ ಮೂಲಕ ಇಲ್ಲಿಗೆ ಬಂದಿದ್ದೇವೆ. ಹಿಂಬಾಗಿಲ ಮೂಲಕ ಬಂದಿಲ್ಲ ಅಂತ ಹರಿಪ್ರಸಾದ್ರಿಗೆ ಚಾಟಿ ಬೀಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments