Select Your Language

Notifications

webdunia
webdunia
webdunia
webdunia

ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಶಿವಮೊಗ್ಗ , ಮಂಗಳವಾರ, 22 ಫೆಬ್ರವರಿ 2022 (07:23 IST)
ಶಿವಮೊಗ್ಗ : ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಮಧಿಸಿದಂತೆ ಶಿವಮೊಗ್ಗ ನಗರ ಬೂದಿ ಮುಚ್ಚಿದ ಕೆಂಡದಂತಿದ್ದು, ಇದೀಗ ಪೊಳೀಸರ ಭದ್ರಕೋಟೆಯಾಗಿದೆ.

ಹರ್ಷನ ಹತ್ಯೆ ಬೆನ್ನಲ್ಲೇ ಖಾಕಿ ಫುಲ್ ಅಲರ್ಟ್ ಆಗಿದೆ. ಶಿವಮೊಗ್ಗ ನಗರದಾದ್ಯಂತ ನಾಳೆ ಬೆಳಗ್ಗೆ 6 ಗಂಟೆವರೆಗೂ ಸೆಕ್ಷನ್ 144 ಜಾರಿ ಮಾಡಲಾಗಿದೆ. ಮುನ್ನೆಚ್ಚರಿಕೆಗಾಗಿ ಶಾಲೆ-ಕಾಲೇಜಿಗೂ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದಲ್ಲಿ ನಿನ್ನೆ ರಾತ್ರಿಯಿಂದ ನಾಳೆ ಮುಂಜಾನೆ 6 ಗಂಟೆಯವರೆಗೆ ಕಫ್ರ್ಯೂ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಕರ್ಫ್ಯೂ ಜಾರಿ ನಡುವೆಯೂ ಮನೆ ಮುಂದೆ ನಿಲ್ಲಿಸಿದ್ದ ಒಂದು ಆಟೋ ಹಾಗು ಒಂದು ಬೈಕ್ ಗೆ ಬೆಂಕಿ ಹಚ್ಚಿದ ಘಟನೆ ಶಿವಮೊಗ್ಗದ ತುಂಗಾನಗರದಲ್ಲಿ ನಡೆದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಿಷೇಧಾಜ್ಞೆ ಜಾರಿ, ಖಾಕಿ ಬಿಗಿ ಭದ್ರತೆ!