ಮನೆಲಿ ಅಂಗವಿಕಲರಿಗೆ ಲಸಿಕೆ: ಕೇಂದ್ರದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

Webdunia
ಸೋಮವಾರ, 20 ಸೆಪ್ಟಂಬರ್ 2021 (15:03 IST)
ನವದೆಹಲಿ : ಅಶಕ್ತರು ಮತ್ತು ಅಂಗವಿಕಲರಿಗಾಗಿ 'ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ' ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ತಿಳಿಸಿದೆ.

ಈ ಕುರಿತು ಕೇಂದ್ರ ಸರ್ಕಾರಕ್ಕೆ ನೋಟಿಸ್ ನೀಡಿರುವ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್ ಮತ್ತು ಬಿ.ವಿ.ನಾಗರತ್ನ ಅವರನ್ನೊಳಗೊಂಡ ಪೀಠ, 'ಅಂಗವಿಕಲರಿಗೆ ಲಸಿಕೆ ನೀಡಲು ಈವರೆಗೆ ಕೇಂದ್ರ ಕೈಗೊಂಡಿರುವ ಕ್ರಮಗಳು ಮತ್ತು ಹೊಸ ಕ್ರಮಗಳಿಗಾಗಿ ಪ್ರಸ್ತಾವನೆ ಸಲ್ಲಿಸಿರುವ ಕುರಿತು ಮಾಹಿತಿ ನೀಡುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಕೇಳಿದೆ.
ಈ ಕುರಿತು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಇವರಾ ಫೌಂಡೇಷನ್ ಸ್ವಯಂ ಸೇವಾ ಸಂಸ್ಥೆ ಪರ ಹಾಜರಾಗಿದ್ದ ವಕೀಲ ಪಂಕಜ್ ಸಿನ್ಹಾ, 'ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡುವುದರಿಂದ, ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಯನ್ನು ನೀಡಬಹುದು' ಎಂದು ಭಾರತೀಯ ವೈದ್ಯಕೀಯ ಸಂಘ ಸಲ್ಲಿಸಿರುವ ದಾಖಲೆ ಸೇರಿದಂತೆ ಎರಡು ದಾಖಲೆಯನ್ನು ಉಲ್ಲೇಖಿಸಿದರು. 'ಜಾರ್ಖಂಡ್ ಮತ್ತು ಕೇರಳದಲ್ಲಿ ಈ ವಿಧಾನ ಯಶಸ್ವಿಯಾಗಿದ್ದು, ಇದನ್ನು ಬೇರೆ ರಾಜ್ಯಗಳಿಗೂ ಅಳವಡಿಸಬಹುದು' ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮನ್ನು ಟೀಕಿಸುತ್ತಾರೆಂದು ಸುಮ್ಮನೇ ಬಿಡಲು ಸಾಧ್ಯವಿಲ್ಲ: ಮಜುಂದೂರ್ ಬಗ್ಗೆ ಡಿಕೆಶಿ ಹೀಗಂದ್ರು

ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸ್ಕೆಚ್‌ ಹಾಕಿದ್ದ ಏಜೆಂಟ್ ನಿಗೂಢ ಸಾವು, ಏನಿದು

ನವೆಂಬರ್ ಕ್ರಾಂತಿ ಸದ್ದು ಬೆನ್ನಲ್ಲೇ ಚರ್ಚೆಗೆ ಕಾರಣವಾದ ಲಕ್ಷ್ಮಣ ಸವದಿ ಹೇಳಿಕೆ

ಪರಪ್ಪನ ಅಗ್ರಹಾರ ಕಾಯಬೇಕಿದ್ದ ಜೈಲು ಸಿಬ್ಬಂದಿಯಿಂದಲೇ ಕನ್ನ, ಏನಿದು ಘಟನೆ

ಪ್ರಭಾಕರ್ ಭಟ್ ಆಗಲಿ, ಅವರಪ್ಪನಾಗಲಿ ಕಾನೂನು ಎಲ್ಲರಿಗೂ ಒಂದೇ: ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments