Webdunia - Bharat's app for daily news and videos

Install App

ನೂತನ ಸಿಎಸ್ ಆಗಿ ವಂದಿತಾ ಶರ್ಮಾ ನೇಮಕ

Webdunia
ಶನಿವಾರ, 28 ಮೇ 2022 (11:20 IST)
ಬೆಂಗಳೂರು : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. 

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments