Webdunia - Bharat's app for daily news and videos

Install App

ನೂತನ ಸಿಎಸ್ ಆಗಿ ವಂದಿತಾ ಶರ್ಮಾ ನೇಮಕ

Webdunia
ಶನಿವಾರ, 28 ಮೇ 2022 (11:20 IST)
ಬೆಂಗಳೂರು : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕವಾಗಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31 ರಂದು ನಿವೃತ್ತ ಆದ ಬಳಿಕ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ.

ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000 ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006 ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017 ನೇ ಇಸವಿಯಲ್ಲಿ ಕೆ. ರತ್ನ ಪ್ರಭ ಅವರೂ ಅಲಂಕರಿಸಿದ್ದರು. 

ಕೆ ರತ್ನ ಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments