Select Your Language

Notifications

webdunia
webdunia
webdunia
webdunia

ರಾಜ್ಯದ ಹಲವೆಡೆ ವರುಣನ ಆರ್ಭಟ

ರಾಜ್ಯದ ಹಲವೆಡೆ ವರುಣನ ಆರ್ಭಟ
ಬೆಂಗಳೂರು , ಗುರುವಾರ, 11 ಮೇ 2023 (07:13 IST)
ಬೆಂಗಳೂರು : ರಾಜ್ಯದ ಹಲವೆಡೆ ವರುಣ ಅಬ್ಬರಿಸುತ್ತಿದ್ದಾನೆ. ಇದೇನು ಬೇಸಿಗೆಯೋ ಮಳೆಗಾಲವೋ ಎಂಬ ಅನುಮಾನ ಬರುವ ರೀತಿಯಲ್ಲಿ ಭಾರೀ ಮಳೆಯಾಗುತ್ತಿದೆ.
 
ಹುಬ್ಬಳ್ಳಿಯಲ್ಲಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನದಿಯೋಪಾದಿಯಲ್ಲಿ ನೀರು ಹರಿದಿದೆ. ಹಲವು ಬೈಕ್ಗಳು ನೀರಿನ ರಭಸಕ್ಕೆ ನೆಲಕ್ಕುರುಳಿದ್ದವು. ತಗ್ಗು ಪ್ರದೇಶಗಳ ಮನೆಗಳಿಗೆ ನೀರುನುಗ್ಗಿ ಜನ ಪರದಾಡಿದರು.

ಕೊಪ್ಪಳದ ಯಲಬುರ್ಗಾದಲ್ಲಿ ಸಿಡಿಲು ಬಡಿದು ಒಬ್ಬರು ಬಲಿಯಾಗಿದ್ದಾರೆ. ಜಗಳೂರಿನಲ್ಲಿ ಮರದ ರೆಂಬೆ ಕಡಿಯಲು ಹೋದ ಯುವಕನೊಬ್ಬ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ. ಕಲಬುರಗಿಯ ಆಳಂದ, ದಾವಣಗೆರೆ, ಹಾವೇರಿಯ ಶಿಗ್ಗಾಂವಿ ಸೇರಿ ಹಲವೆಡೆ ಭರ್ಜರಿ ಮಳೆಯಾಗಿದೆ. 

 

  

Share this Story:

Follow Webdunia kannada

ಮುಂದಿನ ಸುದ್ದಿ

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಅಂತ್ಯ