ರಾಜ್ಯದಲ್ಲಿ ಶಾಂತಸ್ಥಿತಿಗೆ ತಲುಪಿದ ವರುಣ

Webdunia
ಸೋಮವಾರ, 23 ಮೇ 2022 (07:03 IST)
ಬೆಂಗಳೂರು : ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ವರುಣದೇವ ಈಗ ಕೊಂಚ ಶಾಂತವಾಗಿದ್ದಾನೆ.

ಮುಂಗಾರು ಪೂರ್ವ ಮಳೆಯಿಂದಾಗಿ ರಾಜ್ಯದಲ್ಲಿ ಅಪಾಯ ಹಾನಿ ಸಂಭವಿಸಿದೆ. ಈವರೆಗೆ 7,010 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ರೆ, 5,736 ಹೆಕ್ಟೇರ್ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. 4,242 ಮನೆಗಳಿಗೆ ಭಾಗಶಃ ಹಾನಿಯಾಗಿದ್ರೆ, 430 ಜಾನುವಾರು ಹಾಗೂ 12 ಜನರ ಸಾವಾಗಿದೆ.

ಕೊಪ್ಪಳದ ತುಂಗಭದ್ರಾ ಜಲಾಶಯ 65 ವರ್ಷಗಳ ಇತಿಹಾಸದಲ್ಲಿ ಮೇ ತಿಂಗಳಲ್ಲಿ 28 ಟಿಎಂಸಿ ನೀರು ಸಂಗ್ರಹವಾಗಿದೆ. ನಿನ್ನೆ ಒಂದೇ ದಿನ 8 ಟಿಎಂಸಿ ಹರಿದು ಬಂದಿದೆ. ಕಳೆದ ವರ್ಷ ಮೇ ತಿಂಗಳಲ್ಲಿ 7 ಟಿಎಂಸಿ ನೀರು ಸಂಗ್ರಹವಾಗಿತ್ತು. ಸದ್ಯ ಡ್ಯಾಂಗೆ 90 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರಿನ ಒಳಹರಿವಿದೆ. 255 ಕ್ಯೂಸೆಕ್ ನೀರು ಹೊರಗೆ ಬಿಡಲಾಗ್ತಿದೆ.

ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸು ಪಡೆದಿದೆ. ಅಬ್ಬಿ ಜಲಪಾತ ಮೈದುಂಬಿದ್ದು ಪ್ರವಾಸಿಗರನ್ನು ಆಕರ್ಷಿಸ್ತಿದೆ.  ಚಿಕ್ಕಬಳ್ಳಾಪುರದ ಶ್ರೀನಿವಾಸ ಸಾಗರ ಜಲಾಶಯದ ಗೋಡೆ ಹತ್ತಿದ್ದ ಯುವಕ ನೋಡ ನೊಡುತ್ತಿದ್ದಂತೆಯೇ ಹಾರಿ ಕೆಳಗೆ ಬಿದ್ದಿದ್ದಾನೆ. ಈ ಭಯಾನಕ ದೃಶ್ಯ ಅಲ್ಲಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದೆ.

ಆತ ಗೌರಿಬಿದನೂರು ಮೂಲದವನಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅತ್ತ ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಮಿತಿ ಮೀರಿದ್ದು, 25 ಮಂದಿ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಸಿಡ್ನಿ ಗುಂಡಿನ ದಾಳಿಕೋರರಲ್ಲಿ ಒಬ್ಬಾತ ಹೈದರಾಬಾದ್‌ ಮೂಲದವ, ಇಲ್ಲಿದೆ ಮಾಹಿತಿ

ಲಿಯೋನೆಲ್ ಮೆಸ್ಸಿ ಕಾರ್ಯಕ್ರಮದಲ್ಲಿ ಧಾಂದಲೆ: ಪ.ಬಂಗಾಳ ರಾಜಕೀಯದಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments