ಗಗನಕ್ಕೇರಿದೆ ತರಕಾರಿ ಬೆಲೆ!

Webdunia
ಶುಕ್ರವಾರ, 12 ನವೆಂಬರ್ 2021 (16:55 IST)
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಳೆದ ಎರಡೂ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ.
ಮಳೆಯಿಂದಾಗಿ ತರಕಾರಿ ಧಾರಣೆಗಳು ಗಗನಮುಖಿಯಾಗಿವೆ. ಮಾರುಕಟ್ಟೆಗೆ ಬರುತ್ತಿದ್ದ ತರಕಾರಿಗಳ ಪ್ರಮಾಣವೂ ಕಡಿಮೆಯಾಗಿದೆ. ದುಡ್ಡು ಕೊಟ್ಟರೂ ಒಳ್ಳೆಯ ಮಾಲು ಸಿಗುತ್ತಿಲ್ಲ ಎಂದು ಗ್ರಾಹಕರು ಬೇಸರ ವ್ಯಕ್ತಪಡಿಸಿದರೆ, ಕಷ್ಟಪಟ್ಟು ದುಡಿದು ಬೆಳೆದ ಬೆಳೆ ಇನ್ನೇನು ಮಾರುಕಟ್ಟೆಗೆ ಸಾಗಿಸಬೇಕು ಎನ್ನುವ ಹೊತ್ತಿಗೆ ಹಾಳಾಗಿದೆ ಎಂದು ರೈತರು ಅಲವತ್ತುಕೊಳ್ಳುತ್ತಿದ್ದಾರೆ.
ಬಹುತೇಕ ತರಕಾರಿಗಳ ಧಾರಣೆ ₹15ರಿಂದ 20 ಹೆಚ್ಚಾಗಿದೆ. ಬೆಂಡೆಕಾಯಿ ₹ 40ರಿಂದ ₹ 70ಕ್ಕೆ, ಬಟಾಣಿ ₹ 200ರಿಂದ ₹ 280ಕ್ಕೆ, ಮೂಲಂಗಿ ₹ 20ರಿಂದ ₹ 40ಕ್ಕೆ, ಕ್ಯಾರೆಟ್ ₹ 70ರಿಂದ 90ಕ್ಕೆ, ಈರುಳ್ಳಿ ₹ 30ರಿಂದ ₹ 60ಕ್ಕೆ, ಟೊಮೆಟೊ ₹40ರಿಂದ ₹ 70ಕ್ಕೆ, ಆಲೂಗಡ್ಡೆ ₹ 20ರಿಂದ ₹ 40ಕ್ಕೆ, ನವಿಲು ಕೋಸು ₹ 40ರಿಂದ ₹ 120ಕ್ಕೆ, ಹುರುಳಿಕಾಯಿ ₹ 50ರಿಂದ ₹ 70ಕ್ಕೆ, ಕ್ಯಾಪ್ಸಿಕಂ ₹ 50 ರಿಂದ ₹ 80ಕ್ಕೆ ಹೆಚ್ಚಾಗಿದೆ.
ಅಕ್ಕಪಕ್ಕದ ರಾಜ್ಯಗಳಿಗೂ ಬೆಂಗಳೂರು ಮಾರುಕಟ್ಟೆಯಿಂದ ತರಕಾರಿ ಕಳಿಸಲಾಗುತ್ತಿತ್ತು. ಆದರೆ ಇದೀಗ ಬೆಂಗಳೂರಿಗೆ ಬರುವ ತರಕಾರಿ ಪ್ರಮಾಣ ಕಡಿಮೆಯಾಗಿರುವ ಕಾರಣ ಇತರ ರಾಜ್ಯಗಳಿಗೆ ಕಳಿಸಲು ಅಗುತ್ತಿಲ್ಲ ಎಂದು ವ್ಯಾಪಾರಸ್ಥರು ತಿಳಿಸಿದ್ದಾರೆ. ಮಳೆ ಇದೇ ರೀತಿ ಮುಂದುವರಿದರೆ ಹಣ ಕೊಡುತ್ತೇವೆ ಎಂದರೂ ತರಕಾರಿ ಸಿಗದ ಪರಿಸ್ಥಿತಿ ನಿರ್ಮಾಣವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೈ ಹನುಮಾನ್ ಚಿತ್ರ ಘೋಷಣೆ ನಂತ್ರ ಮಂತ್ರಾಲಯದಲ್ಲಿ ಕಾಣಿಸಿಕೊಂಡ ರಿಷಬ್ ಶೆಟ್ಟಿ

ಆರೋಗ್ಯ ಇಲಾಖೆಯೇ ಐಸಿಯುನಲ್ಲಿದೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ

ಭಾರತದಲ್ಲಿ ಅತಿ ಹೆಚ್ಚು ಎಚ್‌ಐವಿ ಪ್ರಕರಣಗಳಿರುವ ರಾಜ್ಯ ಯಾವುದು ಗೊತ್ತಾ

ನಾನು ಸಿಎಂ ಆಗಲೂ ಸಮರ್ಥನೂ: ಜಿ ಪರಮೇಶ್ವರ್‌

ಬಿಜೆಪಿ ಮಾತು ಕೇಳಿ ಕೇಸ್ ಹಾಕಿಸಿಕೊಳ್ಳಬೇಡಿ: ಉದ್ಯೋಗಾಂಕ್ಷಿಗಳಿಗೆ ಪ್ರದೀಪ್ ಈಶ್ವರ್ ಕಿವಿಮಾತು

ಮುಂದಿನ ಸುದ್ದಿ
Show comments