Webdunia - Bharat's app for daily news and videos

Install App

ದಿಢೀರ್ ಏರಿಕೆಯಾದ ತರಕಾರಿ ಬೆಲೆ!

Webdunia
ಮಂಗಳವಾರ, 23 ನವೆಂಬರ್ 2021 (16:22 IST)
ಹುಬ್ಬಳ್ಳಿ : ಅಕಾಲಿಕವಾಗಿ ಸುರಿದ ಭಾರಿ ಮಳೆ ಸೃಷ್ಟಿಸಿದ ಅವಾಂತರಗಳಿಗೆ ಲೆಕ್ಕವಿಲ್ಲ. ಮಳೆಯಿಂದಾಗಿ ಒಂದು ಕಡೆ ರೈತ ಸಮುದಾಯ  ಸಂಕಷ್ಟಕ್ಕೆ ಗುರಿಯಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ಕೈಗೆ ಬಂದ ತುತ್ತು ರೈತರ ಬಾಯಿಗೆ ಬಾರದಂತಾಗಿದೆ. ಇದು ಹೀಗಿರಬೇಕಾದರೆ ಅತಿಯಾದ ಮಳೆ ಹೊಡೆತಕ್ಕೆ ಜನಸಾಮಾನ್ಯನೂ ಕಕ್ಕಾಬಿಕ್ಕಿಯಾಗುವಂತಾಗಿದೆ. ತರಕಾರಿಗಳ ದರ ದಿಢೀರ್ ಏರಿಕೆಯಾಗಿದ್ದು, ಗ್ರಾಹಕನ ಜೇಬಿಗೆ ಕತ್ತರಿ ಬೀಳುವಂತಾಗಿದೆ. ಅತಿವೃಷ್ಟಿಯಿಂದ ತರಕಾರಿ ಬೆಲೆ ಗಗನಕ್ಕೇರಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಟೊಮ್ಯಾಟೊ, ಮೆಣಸಿನಕಾಯಿ ಬೆಲೆ ಶತಕದ ಗಡಿ ದಾಟಿದೆ.
ಹುಬ್ಬಳ್ಳಿ ಜನತಾ ಬಜಾರ್, ದುರ್ಗದ ಬೈಲು, ಸರಾಫ್ ಕಟ್ಟಾ ಮಾರುಕಟ್ಟೆಯಲ್ಲಿ ಪ್ರತಿ ಕೆ.ಜಿ. ಟೊಮ್ಯಾಟೋ 100 ರೂಪಾಯಿಗೆ ಮಾರಾಟವಾಗುತ್ತಿದೆ. ಸಣ್ಣ ಟೊಮೇಟೊ 70 ರಿಂದ 80 ರೂ.ಗಳಿಗೆ ಮಾರಾಟವಾಗುತ್ತಿದೆ. ಹಸಿ ಮೆಣಸಿನಕಾಯಿ ದರ ಪ್ರತಿ ಕೆ.ಜಿ.ಗೆ 100 ರಿಂದ 120 ರೂಪಾಯಿಗೆ ಏರಿಕೆಯಾಗಿದೆ.  ಈರುಳ್ಳಿ ದರ ಅರ್ಧ ಶತಕದ ಗಡಿ ದಾಟಿದೆ.
ಬೆಂಡೆಕಾಯಿ, ಹೀರೇಕಾಯಿ, ಸೌತೇಕಾಯಿ, ಕ್ಯಾರೆಟ್, ಹೂ ಕೋಸು, ಎಲೆ ಕೋಸು ಇತ್ಯಾದಿಗಳ ದರವೂ ಗಗನಮುಖಿಯಾಗಿದೆ. ಕೆಜಿ ಕ್ಯಾರೆಟ್-80 ರೂ., ಬೆಂಡೇಕಾಯಿ-80ರೂ., ಆಲೂಗೆಡ್ಡೆ-35 ರೂ, ಹೀರೇಕಾಯಿ-80, ಬದನೆಕಾಯಿ-50, ಹಸಿಮೆಣಸಿನಕಾಯಿ-100 ರಿಂದ 120 ರೂಪಾಯಿ, ಎಲೆಕೋಸು-40, ಸವತಿಕಾಯಿ-60 ರೂ ಹೀಗೆ ಕಾಯಿಪಲ್ಲೆಗಳ ಬೆಲೆಗಳಲ್ಲಿ ಭಾರೀ ಹೆಚ್ಚಳ ಕಂಡಿವೆ. ಇದರ ಜತೆಗೆ ಸೊಪ್ಪುಗಳ ಬೆಲೆಯಲ್ಲೂ ಭಾರೀ ಏರಿಕೆ ಕಾಣುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments