Webdunia - Bharat's app for daily news and videos

Install App

ಹಬ್ಬದ ಮೊದಲೇ ಏರಿದ ತರಕಾರಿ ಬೆಲೆ

Webdunia
ಶನಿವಾರ, 9 ಅಕ್ಟೋಬರ್ 2021 (19:47 IST)
ಬೀದರ್ : ಬಹುತೇಕ ಜನರು ದಸಾ ಹಬ್ಬದ ಸಂಭ್ರಮದಲ್ಲಿದ್ದಾರೆ. ಕೆಲವರು ಉಪವಾಸ ವ್ರತಾಚರಣೆಯಲ್ಲಿ ತೊಡಗಿದ್ದಾರೆ. ದೇವಿ ಮಂದಿರಗಳಲ್ಲಿ ವಿಶೇಷ ಪೂಜೆ ಹಾಗೂ ಭಜನೆಗಳು ನಡೆದಿವೆ.

ವರುಣದೇವ ಅಬ್ಬರಿಸಿ ತೋಟಗಾರಿಕೆ ಬೆಳೆಗಳಿಗೆ ನಷ್ಟ ಉಂಟು ಮಾಡಿದ್ದಾನೆ. ಹೀಗಾಗಿ ಮಾರುಕಟ್ಟೆಯಲ್ಲಿ ಸಹಜವಾಗಿ ತರಕಾರಿಗಳ ಬೆಲೆಗಳಲ್ಲಿ ಹೆಚ್ಚಳ ಆಗಿದೆ.
ಅಡುಗೆ ರುಚಿ ಹೆಚ್ಚಿಸುವ ಟೊಮೆಟೊ ಬೆಲೆ ಪ್ರತಿ ಕ್ವಿಂಟಲ್ಗೆ ₹ 6 ಸಾವಿರ ಹಾಗೂ ಬೀನ್ಸ್ ₹ 2 ಸಾವಿರ ಹೆಚ್ಚಾಗಿದೆ. ಹಸಿ ಮೆಣಸಿನಕಾಯಿ, ಈರುಳ್ಳಿ, ಬೆಳ್ಳುಳ್ಳಿ ಸಹ ಖಾಟು ಹೆಚ್ಚಿಸಿಕೊಂಡಿವೆ. ತರಕಾರಿ ರಾಜ ಬದನೆಕಾಯಿ ಮಾರುಕಟ್ಟೆಯಲ್ಲಿ ಮತ್ತೆ ಘನತೆ ಹೆಚ್ಚಿಸಿಕೊಂಡಿದ್ದಾನೆ.
ಟೊಮೆಟೊ ಬೆಲೆಯಲ್ಲಿ ಪ್ರತಿ ಕ್ವಿಂಟಲ್ಗೆ ₹ 6 ಸಾವಿರ, ಬೀನ್ಸ್ ₹ 3 ಸಾವಿರ, ಗಜ್ಜರಿ ₹ 2 ಸಾವಿರ, ಬೀಟ್ರೂಟ್ ₹ 1,500 ಮೆಣಸಿನಕಾಯಿ, ನುಗ್ಗೆಕಾಯಿ, ಬದನೆಕಾಯಿ ₹ 1 ಸಾವಿರ, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಹಿರೇಕಾಯಿ, ಬೆಂಡೆಕಾಯಿ, ಹೂಕೋಸು, ಕೊತಂಬರಿ ಬೆಲೆ ₹ 500 ಹೆಚ್ಚಳವಾಗಿದೆ.
ವರುಣದೇವನ ಅವಕೃಪೆಗೆ ಒಳಗಾಗಿ ಮದುಡಿಕೊಂಡ ಎಲೆಕೋಸು ಹಾಗೂ ಸಬ್ಬಸಗಿ ಬೆಲೆ ಕುಸಿದಿದೆ, ತೊಂಡೆಕಾಯಿ, ಮೆಂತೆ ಸೊಪ್ಪು, ಕರಿಬೇವು ಹಾಗೂ ಪಾಲಕ್ ಬೆಲೆ ಮಾತ್ರ ಸ್ಥಿರವಾಗಿದೆ.
ಅತಿವೃಷ್ಟಿಯಿಂದ ತರಕಾರಿ ಹಾಳಾಗಿದೆ. ಹೆಚ್ಚು ತರಕಾರಿ ಮಾರುಕಟ್ಟೆ ಬಂದಿಲ್ಲ. ಸದ್ಯ ನವರಾತ್ರಿ ಇರುವ ಕಾರಣ ಬೆಲೆ ಹೆಚ್ಚಳವಾಗಿದೆ ಎಂದು ತರಕಾರಿ ವ್ಯಾಪಾರಿ ವಿಜಯಕುಮಾರ ಹೇಳುತ್ತಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments